Home ತಾಜಾ ಸುದ್ದಿ ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

0

ಶಿವಮೊಗ್ಗ: ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಇಂದು ಅವರು ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. ‘ಬೋರ್ವೆಲ್ ರಾಮಯ್ಯ’ ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

Exit mobile version