ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ: ಅಂಕಿತ ಹಾಕದ ರಾಜ್ಯಪಾಲರು

0
71

ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ ಬಿದ್ದಿದ್ದರೆ, ಮೈಕ್ರೋ‌ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಬೀಳುತ್ತಿತ್ತು.

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.
ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿತ್ತು. ರಾಜ್ಯಪಾಲರಿಂದ ಹಲವು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆ ವಾಪಸ್ ಕಳಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ಪ್ರಶ್ನಿಸಿದ್ದು, ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ.

Previous articleಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರ ಸಾವು
Next articleನಮ್ಮ ಇನ್‌ಚಾರ್ಜ್ ಹೇಳಿದಂತೆ…