ಉಳ್ಳಾಲ: ಲಾರಿ – ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೃತ ಸವಾರನನ್ನು ಪಾನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಎಂದು ಗುರುತಿಸಲಾಗಿದೆ .
ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಮಂಗಳವಾರ ರಾತ್ರಿ ತಲಪಾಡಿಯಿಂದ ಬರುತ್ತಿದ್ದ ವೇಳೆ ಸಂಕೋಲಿಗೆ ಹಾಲ್ ಬಳಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಸ್ಕೂಟರ್ಗೆ ತಾಗಿದೆ. ಈ ವೇಳೆ ಸವಾರ ಉಮ್ಮರ್ ಫಾರೂಕ್ ಯಾನೆ ಅಝರ್ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಚಲಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.