ನವದೆಹಲಿ: ತೆಲಂಗಾಣದಿಂದ ರಾಜ್ಯಸಭೆ ಉಪಚುನಾವಣೆಗೆ ಪಕ್ಷದ ಮುಖಂಡ ಅಭಿಷೇಕ್ ಮನು ಸಿಂಘ್ವಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಸೇರಿದಂತೆ ತೆಲಂಗಾಣ ಕಾಂಗ್ರೆಸ್ ಘಟಕದ ಹಲವು ಪ್ರಮುಖರು ಮತ್ತು ವಿವಿಧ ಸಚಿವರು, ಶಾಸಕರು, ಎಂಎಲ್ಸಿಗಳು ಮತ್ತು ಸಂಸದರ ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಪಕ್ಷದ ರಾಜ್ಯ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ ಮುನ್ಶಿ ಕೂಡ ಭಾಗವಹಿಸಿದ್ದರು,