ರಾಷ್ಟ್ರ ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಯಿಂದ ಸನ್ಮಾನ, ಬಹುಮಾನ

ಬೆಂಗಳೂರು: ಕರ್ನಾಟಕದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಭ್ಯಸಿಸಿ ರಾಷ್ಟ್ರ ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ ಬಹುಮಾನ ಘೋಷಿಸಿದರು.

ಚಿತ್ರದುರ್ಗ ಜಿಲ್ಲೆಯ ಸಂಜೀವ್ ಮುತ್ತಯ್ಯ
ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಸ್ಥಾನ, ಶೇ 96.8%. ಇವರಿಗೆ 2 ಲಕ್ಷ ರೂ ಬಹುಮಾನ.
ರಾಯಚೂರು ಜಿಲ್ಲೆಯ ವೀರೇಶ್ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ,
ಶೇ. 95.16%. 2 ಲಕ್ಷ ರೂ ಬಹುಮಾನ
ಹಾಗೂ ಬೆಳಗಾವಿ ಜಿಲ್ಲೆಯ ಲೋಹಿತ್ ನೀಲಪ್ಪ ಶಿನೋಬಿ ವಿಜ್ಞಾನ ವಿಭಾಗದಲ್ಲಿ  ಶೇ 95% ತೃತೀಯ ಸ್ಥಾನ ಪಡೆದಿದ್ದು, ಇವರಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಲಾಯಿತು.

ರಾಜ್ಯದಲ್ಲಿ ಒಟ್ಟು 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿದ್ದು, 2024-25ನೇ ಸಾಲಿನಲ್ಲಿ ಒಟ್ಟು 4,534 ವಿದ್ಯಾರ್ಥಿಗಳು ವ್ಯಾಸಂಗ ಮಾಡಿರುತ್ತಾರೆ. ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ  ಮಂತ್ರಾಲಯದ ಅಧೀನದಲ್ಲಿ ಸ್ಥಾಪಿಸಿರುವ  National education society for Tribal students (KESTS) ಮೂಲಕ ಕಾರ್ಯ ನಿರ್ವಹಿಸುತ್ತಿವೆ.

ಈ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿ ರಂದೀಪ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಉಪಸ್ಥಿತರಿದ್ದರು.