Home Advertisement
Home ತಾಜಾ ಸುದ್ದಿ ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಬ್ಬರಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಬ್ಬರಿಗೆ ಜಾಮೀನು

0
121

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 13ನೇ ಆರೋಪಿ ದೀಪಕ್‌ ಕುಮಾರ್‌ ಜಾಮೀನು ಲಭಿಸಿದೆ.
ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಜೈಶಂಕರ್‌ ಅವರು ಇಂದು ಆದೇಶ ಪ್ರಕಟಿಸಿದ್ದು, 13ನೇ ಆರೋಪಿ ದೀಪಕ್‌ ಕುಮಾರ್‌ ಅಲಿಯಾಸ್‌ ದೀಪಕ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ, ಈ ಮೂಲಕ ಪವಿತ್ರಾಗೌಡಗೆ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿದೆ. ಪ್ರಕರಣದ ಎ 13 ದೀಪಕ್, ಎ8 ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗೆಯೇ ಎ11 ನಾಗರಾಜು, ಎ12 ಲಕ್ಷ್ಮಣ್ ಜಾಮೀನು ಅರ್ಜಿ ವಜಾಗೊಳಿಸಿದೆ.