Home ತಾಜಾ ಸುದ್ದಿ ಲಕ್ಷ್ಮಿ ಹೆಬ್ಬಾಳ್ಕರ್ ಅರೋಗ್ಯ ವಿಚಾರಿಸಲು ಯಾರೂ ಬರಬೇಡಿ: ವೈದ್ಯರ ಮನವಿ

ಲಕ್ಷ್ಮಿ ಹೆಬ್ಬಾಳ್ಕರ್ ಅರೋಗ್ಯ ವಿಚಾರಿಸಲು ಯಾರೂ ಬರಬೇಡಿ: ವೈದ್ಯರ ಮನವಿ

0

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಸಂಪೂರ್ಣ ವಿಶ್ರಾಂತಿಯ ಅವಶ್ಯಕತೆಯಿದ್ದು ಅವರನ್ನೂ ಭೇಟಿ ಮಾಡಲು ಬರದಂತೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ್ ಅವರು ಮಾಧ್ಯಮದ ಮುಖಾಂತರ ಮನವಿ ಮಾಡಿದರು
ಲಕ್ಷ್ಮೀ ಹೆಬ್ಬಾಳ್ಕರ್​ ಆರೋಗ್ಯ ವಿಚಾರವಾಗಿ ಮಾತನಾಡಿದ ವೈದ್ಯ ರವಿ ಪಾಟೀಲ್​ ‘ ಕಾರು ಅಪಘಾತದಲ್ಲಿ ಆಗಿ ನಾಲ್ಕು ದಿನ ಆಯ್ತು. ಈ ಅಪಘಾತದಲ್ಲಿ ನಾಲ್ಕು ಜ‌ನ ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಚನ್ನರಾಜ ಹಟ್ಟಿಹೊಳಿ ಗುಣಮುಖರಾಗಿದ್ದಾರೆ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬೆನ್ನು ಮೂಳೆ ಮುರಿದಿದ್ದು, ಮೆದುಳು ಊದಿಕೊಂಡಿದೆ. ಇದಕ್ಕೆ ಚಿಕಿತ್ಸೆ ನೀಡಿದ್ದೇವೆ. ಅವರಿಗೆ 48 ತಾಸು ಕಂಪ್ಲೀಟ್ ರೆಸ್ಟ್ ಬೇಕು, ಮಾತಾಡಲೇಬಾರದು ಎಂದಿದ್ದಾರೆ. ಹಾಗಾಗಿ, ಅವರನ್ನು ನೋಡಲು, ಅರೋಗ್ಯ ವಿಚಾರಿಸಲು ಯಾರೂ ಬರಬಾರದು ಎಂದು ಡಾ ರವಿ ಪಾಟೀಲ್ ಮನವಿ ಮಾಡಿದ್ದಾರೆ.

Exit mobile version