ದಾವಣಗೆರೆ: ಲೋಕಾಯುಕ್ತ ದೂರು ವಿಚಾರಣೆಯಲ್ಲಿ ‘ಸಂಯುಕ್ತ ಕರ್ನಾಟಕ’ದ ವರದಿಗಳು ಸಾಕಷ್ಟು ಸದ್ದು ಮಾಡಿದ್ದು, ಈ ವರದಿಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನ್ಯಾಯ ಒದಗಿಸಿರುವುದಾಗಿ ಉಪ ಲೋಕಾಯುಕ್ತ ಬಿ. ವೀರಪ್ಪ ತಿಳಿಸಿದರು.
ಸುದ್ದಿಗೋಷ್ಢಿಯಲ್ಲಿಯೂ ಈ ವಿಚಾರವಾಗಿ ಮಾತನಾಡಿದ ಅವರು, ಸಂಯುಕ್ತ ಕರ್ನಾಟಕದಲ್ಲಿ ಪ್ರಕಟವಾಗಿದ್ದ ಬಯಲಲ್ಲೇ ಬೋಧನೆ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಕುರಿತು ಪ್ರಕಟಿಸಿದ್ದ ವರದಿಗಳಿಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.