Home ತಾಜಾ ಸುದ್ದಿ ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ: ನಾನೇ ರಾಜ್ಯಾಧ್ಯಕ್ಷನಾಗುತ್ತೇನೆ…

ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ: ನಾನೇ ರಾಜ್ಯಾಧ್ಯಕ್ಷನಾಗುತ್ತೇನೆ…

0

ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ

ಶಿವಮೊಗ್ಗ: ಕೆಲವೇ ದಿನದಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ ನಡೆದು ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 8-10 ದಿನದಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ ನಡೆದು ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಭವಿಷ್ಯ ಯಾವುದೇ ಒಂದು ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನೆಯ ಚುನಾವಣೆ ನಡೆಯುತ್ತದೆ ಎಂದರೆ ಅದು ಬಿಜೆಪಿಯಲ್ಲಿ ಮಾತ್ರ., ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ​ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದರು.

ಏನೇನು ಡ್ಯಾಮೇಜ್ ಆಗಬೇಕು ಎಲ್ಲವೂ ಆಗಿ ಹೋಗಿದೆ: ಯತ್ನಾಳ್‌ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದ ನಂತರ ಎಲ್ಲವೂ ಸರಿಯಾಗಲಿದೆ. ಕಳೆದ ವರ್ಷದಿಂದ ನಾನು ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲಾ ಸಮಸ್ಯೆಗಳು ಬಗೆ ಹರಿಯಲಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಕಳೆದ 1 ವರ್ಷದಿಂದ ದೊಡ್ಡ ಜವಾಬ್ದಾರಿಯನ್ನ ನಿರ್ವಹಿಸುತ್ತಾ ಬಂದಿದ್ದೇನೆ ಎಂದರು.

Exit mobile version