ವಿಧಾನ ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

0
14

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ. ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ಚುನಾವಣೆ ನಡೆಯಬೇಕಿತ್ತು. 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಆಸಿಫ್ ಪಾಷಾ ಎಂಬವರು ಸಲ್ಲಿಕೆ ಮಾಡಿದ್ದ ನಾಮಪತ್ರದಲ್ಲಿ ಸೂಚಕರಿಲ್ಲದ ಕಾರಣ ತಿರಸ್ಕೃತಗೊಳಿಸಲಾಗಿತ್ತು. ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಯಾರೊಬ್ಬರೂ ನಾಮಪತ್ರ ಹಿಂಪಡೆಯದೆ ಇದ್ದುದ್ದರಿಂದ ಕಣದಲ್ಲಿದ್ದ ಎಲ್ಲ 11 ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್‌: ಬೋಸರಾಜು, ಐವಾನ್ ಡಿಸೋಜಾ, ವಸಂತ್ ಕುಮಾರ್, ಬಿಲ್ಕೀಸ್ ಬಾನು‌, ಜಗದೇವ್ ಗುತ್ತೇದಾರ್, ಗೋವಿಂದ್ ರಾಜು, ಯತೀಂದ್ರ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.
ಬಿಜೆಪಿ: ಸಿ.ಟಿ.ರವಿ, ರವಿಕುಮಾರ್, ಎಂ.ಜಿ.ಮೂಳೆ ಆಯ್ಕೆ ಆಗಿದ್ದಾರೆ.
ಜೆಡಿಎಸ್‌: ಜವರಾಯೇಗೌಡ ಆಯ್ಕೆಯಾಗಿದ್ದಾರೆ.

Previous article🏏 ನಾಳೆಯಿಂದ ʻಸಹಾರಾʼ ಕಪ್ 🏆
Next articleನೀವ್ ಗೆಲ್ಲೋದ್ ಯಾವಾಗ…?