ವಿಶ್ವಕಪ್​ ಫೈನಲ್​ ಸೋಲಿನ ಸೇಡು ತೀರಿಸಿಕೊಂಡ ಟೀಮ್‌ ಇಂಡಿಯಾ

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 4 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿ ಫೈನಲ್​​ ಪ್ರವೇಶಿಸಿದೆ.
ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 265 ರನ್​​ಗಳ ಗುರಿಯನ್ನ 11 ಎಸೆತಗಳು ಬಾಕಿ ಇರುವಂತೆಯೇ ಭಾರತ ಗೆಲುವು ಸಾಧಿಸಿತು. ಈ ಮೂಲಕ ಸತತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಅಲ್ಲದೇ 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ.
ಭಾರತ ತಂಡದ ಪರ ವಿರಾಟ್‌ ಕೊಹ್ಲಿ(84), ಶ್ರೇಯಸ್​ ಅಯ್ಯರ್ (45) ಮತ್ತು ಕನ್ನಡಿಗ ಕೆಎಲ್ ರಾಹುಲ್ (ಅಜೇಯ 42)​​ ರನ್‌ಗಳ ಕಾಣಿಕೆ ನೀಡಿದರು.