SK Home Ad
Home ತಾಜಾ ಸುದ್ದಿ ಸುಪ್ರೀಂಕೋರ್ಟ್ ಮುಂದೆ ಬೇಷರತ್ ಕ್ಷಮೆಯಾಚಿಸಿದ ಪತಂಜಲಿ

ಸುಪ್ರೀಂಕೋರ್ಟ್ ಮುಂದೆ ಬೇಷರತ್ ಕ್ಷಮೆಯಾಚಿಸಿದ ಪತಂಜಲಿ

0
133

ನವದೆಹಲಿ: ತಪ್ಪುದಾರಿಗೆಳೆಯುವ ಜಾಹೀರಾತುಗಳಿಗಾಗಿ “ವಿಷಾದ” ವ್ಯಕ್ತಪಡಿಸಿ ಪತಂಜಲಿ ಆಯುರ್ವೇದ ಕಂಪನಿ, ಬೇಷರತ್ ಕ್ಷಮೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ಆಯುರ್ವೇದದ ಮೂಲಕ ಜೀವನಶೈಲಿ ಸಂಬಂಧಿತ ವೈದ್ಯಕೀಯ ತೊಡಕುಗಳಿಗೆ ಪರಿಹಾರಗಳನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯದ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಪತಂಜಲಿಯ ಅನ್ವೇಷಣೆಯಾಗಿದೆ ಎಂದು ಸ್ಪಷ್ಟಪಡಿಸಿದ ಅವರು ಭವಿಷ್ಯದಲ್ಲಿ ಇಂತಹ ಜಾಹೀರಾತುಗಳನ್ನು ನೀಡಲಾಗುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ಸುಪ್ರೀಂ ಕೋರ್ಟ್ ನೀಡಿದ ಶೋಕಾಸ್ ನೋಟಿಸ್‌ಗೆ ಕಂಪನಿಯು ತ್ವರಿತ ಪ್ರತಿಕ್ರಿಯೆ ನೀಡಿದೆ.