ಹತ್ತನೇ ತರಗತಿ ಮಕ್ಕಳಿಗೆ ಕಾರ್ಯಾಗಾರ

0
31

ಯಾದಗಿರಿ: ಹಿಂದುಳಿದ ಯಾದಗಿರಿ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊನೆಯ ಸ್ಥಾನದಲ್ಲಿ ಬರುತ್ತಿರುವ ಹಿನ್ನಲೆಯಲ್ಲಿ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಉತ್ತರಾದಿಮಠದಲ್ಲಿ ಶ್ರೀಸತ್ಯಪ್ರಮೋದ ಯುವ ಸೇನೆಯ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ಪರೀಕ್ಷಾ ತರಬೇತಿಯ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಾಗಾರದಲ್ಲಿ ಪಟ್ಟಣ ಮತ್ತು ವಲಯದ ಎಲ್ಲ ಸರ್ಕಾರಿ(ಕನ್ನಡ ಮಾಧ್ಯಮ) ಪ್ರೌಢ ಶಾಲೆಯ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯವಾಗಿ ಗಣಿತ, ವಿಜ್ಞಾನ, ಇಂಗ್ಲೀಷ ಮತ್ತು ಕನ್ನಡ ವಿಷಯಗಳ ಕುರಿತು ರಾಯಚೂರು, ವಿಜಯಪುರ ಹಾಗೂ ಕಲಬುರಗಿಯ ನುರಿತ ಶಿಕ್ಷಕರಿಂದ ಕಾರ್ಯಾಗಾರದಲ್ಲಿ ಕಲಿಸಿಕೊಟ್ಟರು. ಜಿಲ್ಲಾ, ತಾಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

Previous articleಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ದಾರ್ಶನಿಕ ಸಂತ: ಸಿಎಂ
Next articleಡಿನ್ನರ್ ಪಾರ್ಟಿಗೆ ಬೇರೆ ಅರ್ಥ ಬೇಡ