ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದಿರುವ ಘಟನೆ ನಡೆದಿದೆ.
ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದ್ದಾರೆ, ರಾಜ್ಯ ಸರ್ಕಾರ ಮಂಡನೆ ಮಾಡಿರುವ ಬಜೆಟ್ಲ್ಲಿ ಮುಸ್ಲಿಂ ಮೀಸಲಾತಿ ನೀಡಿರುವ ವಿಚಾರಕ್ಕೆ ಭಾರೀ ಅಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸ್ಪೀಕರ್ ಯುಟಿ ಖಾದರ್ ಅವರಿದ್ದ ಪೀಠವನ್ನೇರಿ ಅವರ ಮೇಲೆ ಬಜೆಟ್ ಪ್ರತಿ ಹರಿದು ಕಾಗದವನ್ನು ತೂರಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲದ ನಡುವೆ ಬಜೆಟ್ಅನ್ನು ಅಂಗೀಕಾರ ಮಾಡಲಾಗಿದೆ. ಕೊನೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಪರಸ್ಪರ ಪೇಪರ್ ತೂರಿ ಇಡೀ ಸದನದಲ್ಲಿ ಹೈಡ್ರಾಮಾ ನಡೆಸಿದ್ದಾರೆ. ಕೊನೆಗೆ ಸ್ಪೀಕರ್ಯುಟಿ ಖಾದರ್ 10 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿಕೆ ಮಾಡಿದ್ದಾರೆ