ಹಿಂದೂ ಮಹಾಸಾಗರದಲ್ಲಿ ಶಾಂತಿಗೆ ಭಾರತ ಬದ್ಧ

ಕಾರವಾರ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಾಮೂಹಿಕ ಭದ್ರತೆಗೆ ಭಾರತ ಸದಾ ಬದ್ಧವಾಗಿದೆ. ಐಒಎಸ್ ಸಾಗರ ಕಾರ್ಯಾಚರಣೆ ಇದಕ್ಕೆ ಸಾಕ್ಷಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದ ಅವರು, ಭಾರತೀಯ ನೌಕಾಪಡೆಯ ಮುಂದಾಳತ್ವದಲ್ಲಿ ಐಎನ್‌ಎಸ್‌ಸ್ ಸುನಯನಾ ಹಡಗಿನ ಮೂಲಕ ಐಒಎಸ್ ಸಾಗರ ಹಡಗು ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
ಹಿಂದೂ ಮಹಾಸಾಗರದಲ್ಲಿ ಭಾರತದ ಹೆಚ್ಚುತ್ತಿರುವ ಉಪಸ್ಥಿತಿಯನ್ನು ತಿಳಿಸಿದ ಅವರು, `ಇದು ನಮ್ಮ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮಾತ್ರ ಸಂಬಂಧಿಸಿಲ್ಲ, ಇದು ಈ ಪ್ರದೇಶದಲ್ಲಿನ ನಮ್ಮ ಸ್ನೇಹಪರ ರಾಷ್ಟ್ರಗಳ ನಡುವಿನ ಹಕ್ಕುಗಳು ಮತ್ತು ಕರ್ತವ್ಯಗಳ ಸಮಾನತೆಯತ್ತಲೂ ಗಮನ ಸೆಳೆಯುತ್ತದೆ. ನಮ್ಮ ನೌಕಾಪಡೆಯು ಹಿಂದೂ ಮಹಾಸಾಗರದಲ್ಲಿ ಯಾವುದೇ ರಾಷ್ಟ್ರವು ತನ್ನ ಅಗಾಧ ಆರ್ಥಿಕತೆ ಮತ್ತು ಮಿಲಿಟರಿ ಶಕ್ತಿಯ ಆಧಾರದ ಮೇಲೆ ಮತ್ತೊಂದು ರಾಷ್ಟ್ರವನ್ನು ದಮನಿಸುವುದಿಲ್ಲ ಎಂಬುದನ್ನು ಖಚಿತಪಡಿಸುವ ಜೊತೆಗೆ, ರಾಷ್ಟ್ರಗಳ ಹಿತಾಸಕ್ತಿಗಳನ್ನು ಅವರ ಸಾರ್ವಭೌಮತ್ವಕ್ಕೆ ಧಕ್ಕೆಯಾಗದಂತೆ ರಕ್ಷಿಸುತ್ತದೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ ಎಂದರು.
ಈ ಪ್ರದೇಶದಲ್ಲಿ ಹಡಗುಗಳ ಅಪಹರಣ ಮತ್ತು ಕಡಲ್ಗಳ್ಳರ ಕೃತ್ಯಗಳಂತಹ ಘಟನೆಗಳ ಸಂದರ್ಭದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ ಭಾರತೀಯ ನೌಕಾಪಡೆಯನ್ನು ಕಾರ್ಯವನ್ನು ಶ್ಲಾಘಿಸಿದ ಅವರು, ನೌಕಾಪಡೆಯು ಭಾರತೀಯ ಹಡಗುಗಳಲ್ಲದೆ ವಿದೇಶಿ ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಮುಕ್ತ ಸಂಚರಣೆ, ನಿಯಮ ಆಧಾರಿತ ಕ್ರಮ, ಕಡಲ್ಗಳ್ಳತನ ವಿರೋಧಿ ಮತ್ತು ಹಿಂದೂ ಮಹಾ ಸಾಗರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಭದ್ರಪಡಿಸುವುದು ಭಾರತೀಯ ನೌಕಾಪಡೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಅತ್ಯಾಧುನಿಕ ಹಡಗುಗಳು, ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳು ಮತ್ತು ಉತ್ತಮ ತರಬೇತಿ ಪಡೆದ ಮತ್ತು ಪ್ರೇರಿತ ನಾವಿಕರೊಂದಿಗೆ ಹಿಂದೂ ಮಹಾ ಸಾಗರವನ್ನು ಅಭಿವೃದ್ಧಿ ಪಡಿಸುವತ್ತ ನಾವು ಇತರ ಸ್ನೇಹಪರ ರಾಷ್ಟ್ರಗಳೊಂದಿಗೆ ಮುಂದುವರಿಯಲು ನಿರ್ಧರಿಸುತ್ತೇವೆ ಎಂದರು.