Home Advertisement
Home ತಾಜಾ ಸುದ್ದಿ ಹುಬ್ಬಳ್ಳಿಗೆ ಬಂದಿಳಿದ ಸಿಐಡಿ ಡಿಜಿಪಿ ಡಾ.ಎಂ.ಎ‌. ಸಲೀಂ

ಹುಬ್ಬಳ್ಳಿಗೆ ಬಂದಿಳಿದ ಸಿಐಡಿ ಡಿಜಿಪಿ ಡಾ.ಎಂ.ಎ‌. ಸಲೀಂ

0
57

ಹುಬ್ಬಳ್ಳಿ: ಪ್ರಿಯಕರನಿಂದಲೇ ಹತ್ಯೆಗೀಡಾದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಬಹುತೇಕ ಪೂರ್ಣಗೊಳಿಸಿದ್ದು, ಅಂತಿಮ ಮೊಳೆ ಹೊಡೆಯಲು ಸಿಐಡಿ ಡಿಜಿಪಿ ಡಾ.ಎಂ.ಎ‌. ಸಲೀಂ ಸೋಮವಾರ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಎರಡೂ ಕೊಲೆಗಳ ತನಿಖೆ ನಡೆಸುತ್ತಿರುವ ಸಿಐಡಿ ಎಸ್ಪಿ ವೆಂಕಟೇಶ ಅವರಿಂದ ಅಂಜಲಿ ಹಾಗೂ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯ ಮಾಹಿತಿ ಸಂಗ್ರಹಿಸಲಿದ್ದಾರೆ.
ನಂತರ ಸಿಐಡಿ ಅಧಿಕಾರಿಗಳ ಜೊತೆಗೆ ಮೀಟಿಂಗ್ ನಡೆಸುವ ಸಾಧ್ಯತೆ ಇದೆ.