22ರಂದು ನೃತ್ಯಕಥಾ ನೃತ್ಯೋತ್ಸವ

0
18

ಬೆಂಗಳೂರು: ರಾಜಧಾನಿ ಈಗ ವಿಭಿನ್ನವಾದ ನೃತ್ಯ ಉತ್ಸವಕ್ಕೆ ಅಣಿಯಾಗಿದೆ. ಪ್ರತಿ ಬಾರಿಯೂ ವಿಶೇಷ, ವಿಭಿನ್ನ ಸಂಗೀತ-ನೃತ್ಯ ಸಮಾರಾಧನೆ ಮಾಡುವ ಉಡುಪ ಪ್ರತಿಷ್ಠಾನ ಬೆಂಗಳೂರಿನ ಜಯನಗರದ ಜೆಎಸ್‌ಎಸ್ ಸಭಾಂಗಣದಲ್ಲಿ ಫೆ. 22ರ ಸಂಜೆ 5.30ಕ್ಕೆ ನೃತ್ಯಕಥಾ-ನೃತ್ಯೋತ್ಸವ 4ನೇ ಆವೃತ್ತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಪದ್ಮಶ್ರೀ ಪುರಸ್ಕೃತ ಖ್ಯಾತ ಕಲಾವಿದೆ ಮಾಳವಿಕಾ ಸಾರುಕ್ಕೈ ಅವರು ‘ದರ್ಶನ’ ಮತ್ತು ಆಚಾರ್ಯ ಇಂದಿರಾ ಕಡಂಬಿ ಅವರು ಅಂಬಲಂ ತಂಡದೊಂದಿಗೆ ‘ಕೊಹಂ-ದಿ ಸರ್ಚ್ ಎಂಬ ವಿಷಯಾಧಾರಿತ ವಿಶೇಷ ನೃತ್ಯ ಪ್ರಸ್ತುತಿ ಮಾಡುತ್ತಿರುವುದು ಬಹು ವಿಶೇಷವಾಗಿದೆ ಎಂದು ನೃತ್ಯೋತ್ಸವ ಆಯೋಜಕರು ಮತ್ತು ಫೌಂಡೇಷನ್ ಟ್ರಸ್ಟಿ ಸಂಧ್ಯಾ ಉಡುಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಶಮಾನೋತ್ಸವ ಸಂಭ್ರಮ:
ಉಡುಪ ಪ್ರತಿಷ್ಠಾನವು ಪ್ರತಿ ತಿಂಗಳೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ವೃದ್ಧಾಶ್ರಮ, ಕ್ಯಾನ್ಸರ್ ಪುನರ್ವಸತಿ ಕೇಂದ್ರ ಮತ್ತು ಆಟಿಸಂ ಕೇಂದ್ರಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಅಲ್ಲಿನವರಿಗೆ ಮನೋಲ್ಲಾಸ ನೀಡುವ ಸೇವೆ ಮಾಡುತ್ತಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಾನವು ಈವರೆಗೆ ದೇಶ-ವಿದೇಶಗಳ 292 ಪ್ರಖ್ಯಾತ ಕಲಾವಿದರನ್ನು ಆಹ್ವಾನಿಸಿ 148 ಸಂಗೀತ ಕಛೇರಿಗಳನ್ನು ವಿವಿಧೆಡೆ ಆಯೋಜನೆ ಮಾಡಿದ ಕೀರ್ತಿಗೆ ಭಾಜನವಾಗಿದೆ. ಇದೀಗ 149ನೇ ಕಾರ್ಯಕ್ರಮ ಸಮರ್ಪಣೆಯಾಗಲಿದೆ ಎಂದು ನೃತ್ಯೋತ್ಸವ ಆಯೋಜಕರು ಮತ್ತು ಫೌಂಡೇಷನ್ ಟ್ರಸ್ಟಿ ಸಂಧ್ಯಾ ಉಡುಪ ಖುಷಿಯಿಂದಲೇ ಹೇಳಿದ್ದಾರೆ.

Previous articleಮುಡಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Next articleಚಾಲಕನಿಗೆ ಹೃದಯಾಘಾತ: ಸರಣಿ ಅಪಘಾತದಲ್ಲಿ ಓರ್ವ ಸಾವು