ಭುವನೇಶ್ವರ: 46 ವರ್ಷಗಳ ನಂತರ ಪುರಿಯ ಜಗನ್ನಾಥ ದೇವಾಲಯದ ಖಜಾನೆಯಾದ ರತ್ನ ಭಂಡಾರವನ್ನು ಮತ್ತೆ ತೆರೆಯಲಾಗಿದೆ.
12ನೇ ಶತಮಾನದ ಬೆಲೆಬಾಳುವ ವಸ್ತುಗಳ ದಾಸ್ತಾನು ಮತ್ತು ಅದರ ರಚನೆಯ ದುರಸ್ತಿಗಾಗಿ ಭಾನುವಾರ ಮತ್ತೆ ತೆರೆಯಲಾಗಿದೆ, ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಭಂಡಾರವನ್ನು ಪುನಃ ತೆರೆಯಲಾಯಿತು,