ವಿಮಾನ ವಿಳಂಬದಿಂದ ಜೀವ ಉಳಿಯಿತು

0
38

ಪಣಜಿ: ಗೋವಾದ ಹಡಪಡೆಯ ನೈಟ್‌ಕ್ಲಬ್‌ನಲ್ಲಿ ಶನಿವಾರ ಮಧ್ಯರಾತ್ರಿಯ ವೇಳೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪಾರ್ಟಿಗೆ ತೆರಳಬೇಕಿದ್ದ ದೆಹಲಿಯ ಪ್ರವಾಸಿಗ ವಿಮಾನ ವಿಳಂಬವಾಗಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.

ದೆಹಲಿಯಿಂದ ಗೋವಾಕ್ಕೆ ಬಂದಿದ್ದ ಪ್ರವಾಸಿಗ ನಿಖ್ನೇಶ್ 10.30ರ ಸುಮಾರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಗೋವಾದಲ್ಲಿ ಹಡಪಡೆಯಲ್ಲಿ ಬುಕ್ ಮಾಡಿದ್ದ ಹೋಟೆಲ್‌ಗೆ ರಾತ್ರಿ 12 ಗಂಟೆಯ ವೇಳೆಗೆ ತಲುಪಿದರು. ಹಡಪಡೆಯಲ್ಲಿ ನೈಟ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪಾರ್ಟಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳುವಷ್ಟರಲ್ಲಿ ಈ ಅಗ್ನಿ ಅವಘಡದ ಮಾಹಿತಿ ಬಂತು. ಇದರಿಂದಾಗಿ ಡಿಜೆ ಪಾರ್ಟಿಗೆ ಹೋಗಲಿಲ್ಲ ಎಂಬ ಮಾಹಿತಿ ನೀಡಿದ್ದಾರೆ.

ದುರಂತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದಿದ್ದ ಕಿರಣ್ ಪಾಟೀಲ್ ಎಂಬ ಪ್ರವಾಸಿಗರು ತನ್ನ ಸ್ನೇಹಿತನಿಗೆ ಫೋನ್ ಕರೆ ಹೋಗುತ್ತಿಲ್ಲ. ಸ್ನೇಹಿತ ಇದೇ ನೈಟ್‌ ಬಾರ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಅವನಿಗೆ ನಿನ್ನೆ ರಾತ್ರಿ ಪಾಳಿಯಿತ್ತು. ಅವನ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ದೂರವಾಣಿ ಕರೆ ಮಾಡಿದರೆ ಕರೆ ಹೋಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನೈಟ್‌ಕ್ಲಬ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ ಪೂರ್ಣಾ ಬಹಾದ್ದೂರ್, ಝಾರ್ಖಂಡ್ ಮೂಲದ ಇಬ್ಬರು ಸಹೋದರರು ಕೂಡ ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಇವರ ಸಂಬಂಧಿಕರು ಬಂದು ತಮ್ಮ ದುಃಖ ತೋಡಿಕೊಂಡಿದ್ದಾರೆ.

Previous articleಅಂತರ್ಜಾತಿ ವಿವಾಹ ಹೆಚ್ಚಾಗಲಿ: ಪ್ರತಿ ದಂಪತಿಗೆ ಒಂದೋ-ಎರಡೋ ಮಕ್ಕಳು ಸಾಕು – ಸಿಎಂ ಸಿದ್ದರಾಮಯ್ಯ
Next articleಕೆಎಸ್‌ಸಿಎ ನೂತನ ಅಧ್ಯಕ್ಷರಾಗಿ ವೆಂಕಟೇಶ್​ ಪ್ರಸಾದ್ ಆಯ್ಕೆ

LEAVE A REPLY

Please enter your comment!
Please enter your name here