ಭೀಕರ ಅಪಘಾತ: ಕಾರಿನೊಳಗೆ ನುಗ್ಗಿದ ಕಬ್ಬಿಣದ ರಾಡ್, ಚಾಲಕ ಸಾವು

ಗುರುಗ್ರಾಮ್ (ಹರಿಯಾಣ) : ಹರಿಯಾಣದ ಗುರುಗ್ರಾಮ್‌ನ ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ದೇಶದಾದ್ಯಂತ ಆಘಾತ ಮೂಡಿಸಿದೆ. ಬಿಳಿ ಬಣ್ಣದ ಕ್ಯಾಬ್‌ವೊಂದು ಟಿಎಂಟಿ ಕಬ್ಬಿಣದ ರಾಡ್‌ಗಳನ್ನು ತುಂಬಿಕೊಂಡಿದ್ದ ಇ-ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ, ರಾಡ್‌ಗಳು ಕಾರನ್ನು ಭೇದಿಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರಿನ ಹಿಂಭಾಗದಲ್ಲಿ ಪ್ರಯಾಣಿಸುತ್ತಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುವ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ನಿಧನ ಹೇಗೆ … Continue reading ಭೀಕರ ಅಪಘಾತ: ಕಾರಿನೊಳಗೆ ನುಗ್ಗಿದ ಕಬ್ಬಿಣದ ರಾಡ್, ಚಾಲಕ ಸಾವು