SK Home Ad
Home ಸುದ್ದಿ ದೇಶ AN-32 ವಿಮಾನ ದುರಂತ: ಐವರು ವಾಯು ಯೋಧರ ಸಾವು

AN-32 ವಿಮಾನ ದುರಂತ: ಐವರು ವಾಯು ಯೋಧರ ಸಾವು

0
245

ನವದೆಹಲಿ: ಅಸ್ಸಾಂನ ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಅಪಘಾತದಲ್ಲಿ ಐವರು ವಾಯು ಯೋಧರು ಹುತಾತ್ಮರಾಗಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಸ್ಕ್ವಾಡ್ರನ್ ಲೆಫ್ಟಿನೆಂಟ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್, ಸಾರ್ಜೆಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ್ವಾಯು ಖೇಮರಾಮ್ ಕುಮಾವತ್ ಹಾಗೂ ಅಗ್ನಿವೀರ್ವಾಯು ಡ್ಯಾನಿಶ್ ಆಲಂ ಅವರು ಕರ್ತವ್ಯದ ವೇಳೆ ಸರ್ವೋಚ್ಚ ತ್ಯಾಗ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಶುಲ್ಕ ವಿರೋಧಿಸಿ ಜೂನ್ 17ರಿಂದ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ

ಅವರ ಧೈರ್ಯ, ಸೇವೆ ಮತ್ತು ರಾಷ್ಟ್ರದ ಮೇಲಿನ ಸಮರ್ಪಣೆಯನ್ನು ದೇಶ ಸದಾ ಹೆಮ್ಮೆ ಮತ್ತು ಕೃತಜ್ಞತೆಯಿಂದ ಸ್ಮರಿಸಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಜೊತೆಗೆ ಮೃತ ಯೋಧರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿ, ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದ್ದಾರೆ.