ರಾಜೀನಾಮೆ ನೀಡದ ದೀದಿ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜನೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜಕೀಯ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ರಾಜ್ಯಪಾಲ ಆರ್.ಎನ್. ರವಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಅಧಿಕಾರ ಬಿಟ್ಟುಕೊಡಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ ಕೊನೆಯ ದಾಳವೂ ವಿಫಲವಾದಂತಾಗಿದೆ. ಬುಧವಾರ ಮೇ 6 ರಂದು ಮಧ್ಯರಾತ್ರಿ ಹಿಂದಿನ ಸರಕಾರದ ಅವಧಿ ಮುಕ್ತಾಯವಾಗಿದ್ದು, ಗುರುವಾರ ರಾಜ್ಯಪಾಲರು ವಿಧಾನಸಭೆ ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.