SK Home Ad
Home ತಾಜಾ ಸುದ್ದಿ ನಿತ್ಯಾನಂದನ ಆರೋಗ್ಯ ಸ್ಥಿತಿ ಗಂಭೀರ…

ನಿತ್ಯಾನಂದನ ಆರೋಗ್ಯ ಸ್ಥಿತಿ ಗಂಭೀರ…

0
259

ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯದಲ್ಲಿ ಏರುಪೇರಾಗಿದ್ದು, ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಶ್ರೀಕೈಲಾಸದ ವಿದೇಶಾಂಗ ವ್ಯವಹಾರಗಳ ಮಂತ್ರಿ ಎಂದು ಹೇಳಿಕೊಳ್ಳುವ ನಿತ್ಯಪ್ರೇಮಾತ್ಮ ಆನಂದ ಸ್ವಾಮಿಯವರು ಬರೆದ ಪತ್ರದಲ್ಲಿ ಶ್ರೀಲಂಕಾ ಅಧ್ಯಕ್ಷರಿಗೆ – “ಹಿಂದೂ ಧರ್ಮದ ಪರಮ ಪೀಠಾಧಿಪತಿ ಅವರ ಪರಮ ಪೂಜ್ಯ ಶ್ರೀ ನಿತ್ಯಾನಂದ ಪರಮಶಿವಂ ಅವರಿಗೆ ಗಂಭೀರ ವೈದ್ಯಕೀಯ ಸ್ಥಿತಿಗೆ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಲಭ್ಯವಿರುವ ವೈದ್ಯರು, ನಿತ್ಯಾನಂದ ಅವರಿಗೆ ಆಧಾರವಾಗಿರುವ ವೈದ್ಯಕೀಯ ಸ್ಥಿತಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಹಿಂದೂ ಧರ್ಮದ ಪರಮ ಪೀಠಾಧಿಪತಿ ಪ್ರಸ್ತುತ ಶ್ರೀಕೈಲಾಸದ ಸಾರ್ವಭೌಮ ಭೂಮಿಯಲ್ಲಿದ್ದಾರೆ. ಇದು ಈ ಸಮಯದಲ್ಲಿ ಅತ್ಯಂತ ತುರ್ತಾಗಿ ಅಗತ್ಯವಿರುವ ವೈದ್ಯಕೀಯ ಮೂಲಸೌಕರ್ಯವನ್ನು ಹೊಂದಿಲ್ಲ’’ ಎಂದು ಪತ್ರದಲ್ಲಿ ವಿವರಿಸಲಾಗಿದೆ.