SK Home Ad
Home ಸುದ್ದಿ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

0
449

ನವದೆಹಲಿ: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಆಯ್ಕೆಗೆ ಅನುಮೋದನೆ ನೀಡಿದ್ದು, ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಮತ್ತು ಶಿವಣ್ಣ ಮಲ್ಲವಳ್ಳಿ ಅವರನ್ನು ಕಣಕ್ಕಿಳಿಸಲಾಗಿದೆ.

ಈ ಅಭ್ಯರ್ಥಿಗಳ ಘೋಷಣೆಯೊಂದಿಗೆ ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಚುನಾವಣೆಯ ಸಿದ್ಧತೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಪಕ್ಷದ ಹಿರಿಯ ಹಾಗೂ ಅನುಭವಿ ನಾಯಕರಿಗೆ ಅವಕಾಶ ನೀಡಿದೆ.