ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ಬಳಕೆಯಾಗಿರುವ ಹಣದ ಮೂಲ ಪತ್ತೆ ಮಾಡಲು ಜಾರಿ ನಿರ್ದೇಶನಾಲಯ ಈಗ ಅಧಿಕೃತವಾಗಿ ಮುಂದಾಗಿದೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಇಲಾಖೆಗೆ ನೀಡಿದ್ದ ಮನವಿಯನ್ನು ಸಚಿವಾಲಯ ಇಡಿಗೆ ಕಳುಹಿಸಿತ್ತು. ಈ ದೂರಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಅಡಿಯಲ್ಲಿ ಇಡಿ ತನಿಖೆ ನಡೆಸಲಿದೆ.
ನಿಯಮ ಉಲ್ಲಂಘನೆ, ಹಣದ ಅಕ್ರಮ ಬಳಕೆಯ ಪುರಾವೆಗಳು ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಕೆಲ ಸಂಸ್ಥೆಗಳ 5 ವರ್ಷಗಳ ಹಣಕಾಸು ವ್ಯವಹಾರ ವಿವರ ನೀಡಲು ಬ್ಯಾಂಕ್ಗಳಿಗೆ ಇಡಿ ಪತ್ರ ಬರೆದಿದೆ. ವಹಿವಾಟು ಶಂಕಾಸ್ಪದವಾಗಿದ್ದರೆ ವಿಚಾರಣೆಗೊಳಪಡಿಸುವ ಸಾಧ್ಯತೆಗಳಿವೆ.
ಏನಿದು ಆರೋಪ?: ವಿದೇಶಿ ಸಂಸ್ಥೆಗಳಿಂದ ಷಡ್ಯಂತ್ರಕ್ಕೆ ಹಣಕಾಸು ನೆರವು ಸಿಕ್ಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಎನ್ಜಿಒಗಳು, ಪಾಲುದಾರರಿಗೆ ಸಂಬಂಧಿಸಿದ ವಿವರ ಹಾಗೂ ದಾಖಲೆಗಳ ಸಂಗ್ರಹಕ್ಕೆ ಇಡಿ ಮುಂದಾಗಿದೆ.
ಕಳೇಬರದ ಅವಶೇಷಗಳು ಸಿಗದ ಹಿನ್ನೆಲೆಯಲ್ಲಿ ಇದೊಂದು ದೊಡ್ಡ ಷಡ್ಯಂತ್ರವಾಗಿರಬಹುದು ಎಂಬ ಆರೋಪ ಕೇಳಿಬಂದಿತ್ತು. ಇದರ ಹಿಂದೆ ವಿದೇಶಿ ಹಣದ ಹರಿವಿನ ಶಂಕೆ ವ್ಯಕ್ತವಾಗಿತ್ತಲ್ಲದೇ ಈ ಕುರಿತು ಇಡಿ ತನಿಖೆ ನಡೆಯಬೇಕೆಂಬ ಒತ್ತಾಯವೂ ಕೇಳಿಬಂದಿತ್ತು.