Government Employee: ಈ ಕೆಲಸ ಮಾಡದಿದ್ದರೆ ಸರ್ಕಾರಿ ನೌಕರರ ವೇತನ ಕಡಿತ

0
62

ಬೆಂಗಳೂರು: Government Employee ಕರ್ನಾಟಕದ ಸರ್ಕಾರಿ ನೌಕರರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಆಗಸ್ಟ್ 31ರೊಳಗೆ ಈ ಕೆಲಸ ಮಾಡದಿದ್ದರೆ ನೌಕರರ ವೇತನ ಕಡಿತವಾಗಲಿದೆ.

ಸರ್ಕಾರದ ಪತ್ರ ದಿನಾಂಕ 16/07/2025ರಲ್ಲಿ ಸರ್ಕಾರದ ಎಲ್ಲಾ ಅರ್ಹ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್‌ ಖಾತೆಯನ್ನು ನೋಂದಾಯಿಸಿಕೊಳ್ಳಲು ಹಾಗೂ PMEBY & PMJJBY ವಿಮಾ ಯೋಜನೆ ಪಡೆಯಲು ಸೂಚಿಸಲಾಗಿತ್ತು.

ಅದರಂತೆ ‘ಎ’ ಗುಂಪಿನ ಅಧಿಕಾರಿಗಳಿಗೆ ಹೆಚ್.ಆರ್.ಎಮ್.ಎಸ್.ನಲ್ಲಿ ನೋಂದಾಯಿಸಲು ದಿನಾಂಕ 31/08/2025 ಕೊನೆಯ ದಿನಾಂಕವಾಗಿದೆ. ಯಾರು ಇದುವೆರೆಗೂ ನೋಂದಾಯಿಸಿರುವುದಿಲ್ಲವೂ ಅವರ ವೇತನವನ್ನು ಹೆಚ್.ಆರ್.ಎಮ್.ಎಸ್.ನಲ್ಲಿ ತಡೆಹಿಡಿಯಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿತ್ತು.

ಪತ್ರದ ವಿವರಗಳು: ಈ ಕುರಿತು ಡಾ. ವಿಶಾಲ್ ಆರ್, ಸರ್ಕಾರದ ಕಾರ್ಯದರ್ಶಿ, ವಿತ್ತೀಯ ಸುಧಾರಣೆ, ಆರ್ಥಿಕ ಇಲಾಖೆ ಪತ್ರವನ್ನು ಬರೆದಿದ್ದರು. ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ, ವಿಧಾನ ಸೌಧ ಬೆಂಗಳೂರು. ಅಧ್ಯಕ್ಷರು, ಕರ್ನಾಟಕ ರಾಜ್ಯ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಇವರಿಗೆ ಪತ್ರವನ್ನು ಕಳಿಸಲಾಗಿತ್ತು.

ಈ ಪತ್ರವು ಸರ್ಕಾರದಿಂದ ನೇರವಾಗಿ/ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಅರ್ಹ ಅಧಿಕಾರಿ/ ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿತ್ತು. ಪತ್ರ ದಿನಾಂಕ 27.02.2025 ಉಲ್ಲೇಖಿಸಲಾಗಿತ್ತು.

ಪತ್ರದಲ್ಲಿ ಸರ್ಕಾರದ ಇಲಾಖೆಗಳಲ್ಲಿ ನೇರವಾಗಿ/ ಪರೋಕ್ಷವಾಗಿ ಇರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಜಾಲವನ್ನು ಜಾರಿಗೆ ತರಲು ಅಥವಾ ಹೆಚ್ಚಿಸಲು ಉದ್ದೇಶಿಸಿರುವ ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 21.02.2025ರ ಬಗ್ಗೆ ತಮ್ಮ ಗಮನವನ್ನು ಸೆಳೆಯಲಾಗಿದೆ.

ಸರ್ಕಾರಿ ಆದೇಶದ ಉದ್ದೇಶವೆಂದರೆ ವಿವಿಧ ಬ್ಯಾಂಕುಗಳು ತಮ್ಮ ಸಂಬಳ ಪ್ಯಾಕೇಜುಗಳಲ್ಲಿ ಉಚಿತವಾಗಿ ಅಥವಾ ನಾಮಮಾತ್ರ ವೆಚ್ಚದಲ್ಲಿ ನೀಡುವ ಅಪಘಾತ/ ಅವಧಿ ವಿಮಾ ರಕ್ಷಣೆ ಮತ್ತು ಇತರ ಪ್ರಯೋಜನಗಳನ್ನು ಅಧಿಕಾರಿ/ ನೌಕರರು ಪಡೆದು, ತಮ್ಮ ಅವಲಂಬಿತ ಕುಟುಂಬಗಳನ್ನು ಸುರಕ್ಷಿತಗೊಳಿಸುವುದು.

ಅಲ್ಲದೆ, ಸಂಬಂಧಪಟ್ಟ ಅಧಿಕಾರಿ/ ನೌಕರರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯೋಜನೆಗಳಡಿ ಹೆಚ್ಚಿನ ವಿಮಾ ರಕ್ಷಣೆಗಾಗಿ ನೋಂದಾವಣಿ ಮಾಡಿಕೊಳ್ಳಲು ಪ್ರೇರೇಪಿಸುವುದು. ಅದಲ್ಲದೆ ಹೆಚ್ಚುವರಿ/ ನಾಮಮಾತ್ರ ಪ್ರೀಮಿಯಂ ಪಾವತಿಸುವ ಮೂಲಕ, ಹೆಚ್ಚಿನ ವಿಮಾ ರಕ್ಷಣೆಗಾಗಿ ಬ್ಯಾಂಕುಗಳು ನೀಡುತ್ತಿರುವ ವೈಯಕ್ತಿಕ ಅಪಘಾತ ವಿಮೆಯನ್ನು ಪಡೆಯಲು ಪ್ರೋತ್ಸಾಹಿಸುವುದು.

ಆದ್ದರಿಂದ, ಸರ್ಕಾರಿ ಆದೇಶದ ಹೊರಡಿಸಿದ 3 ತಿಂಗಳಲ್ಲಿ ಎಲ್ಲಾ ಅಧಿಕಾರಿ/ ನೌಕರರು ಮತ್ತು ವಿವಿಧ ನಿಗಮಗಳು/ ಮಂಡಳಿಗಳ ಉದ್ಯೋಗಿಗಳು ತಮ್ಮ ಕುಟುಂಬಗಳ ಹಿತದೃಷ್ಟಿಯಿಂದ ತಮ್ಮ ಆಯ್ಕೆಯ ಯಾವುದೇ ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್‌ಗಳನ್ನು ಸ್ವಯಂಪ್ರೇರಿತವಾಗಿ ಆಯ್ಕೆ ಮಾಡಲು ಹೆಚ್ಚಿನ ಆಸಕ್ತಿಯಿಂದ ಮನವೊಲಿಸುವುದು ಮತ್ತು ಸಂಬಂಧಪಟ್ಟ ಬ್ಯಾಂಕಿಗೆ ಸಂಬಳ ಪ್ಯಾಕೇಜುಗಳಲ್ಲಿ ಸೇರಿಸಲು ಅರ್ಜಿಯನ್ನು ಸಲ್ಲಿಸಲು ತಮ್ಮನ್ನು ಮತ್ತು ಎಲ್ಲಾ ಅಧಿಕಾರಿ/ ನೌಕರರನ್ನು ಪ್ರೇರೇಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖಾ ಮುಖ್ಯಸ್ಥರನ್ನು ಕೋರಲಾಗಿತ್ತು.

ಸರ್ಕಾರಿ ಆದೇಶ ಹೊರಡಿಸಿ 42 ತಿಂಗಳಾದರೂ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಂಡ ಅಧಿಕಾರಿಗಳು/ ನೌಕರರ ಸಂಖ್ಯೆ 3 ಲಕ್ಷಗಳಿಗೆ ಮಾತ್ರ ತಲುಪಿದೆಯೆಂದು ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY)ಯಡಿ 32,611 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY)ಯಡಿ 25,386 ನೋಂದಣಿಗಳು ಮಾತ್ರ ಹೆಚ್.ಆರ್.ಎಂ.ಎಸ್.ನಲ್ಲಿ ದಾಖಲಾಗಿದ್ದು, ಯೋಜನೆಗಳಡಿ ಹೆಚ್ಚಿನ ಪ್ರಗತಿಯಾಗಿರುವುದಿಲ್ಲವೆಂದು ತಿಳಿದುಬಂದಿದೆ.

ಸರ್ಕಾರಿ ಆದೇಶದಲ್ಲಿ ವಿವರಿಸಿದಂತ ಎಲ್ಲಾ ಅರ್ಹ ಅಧಿಕಾರಿ/ ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು
ಯೋಚಿಸಿದೆ.

ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಿದ ಕಡೆಯ ದಿನಾಂಕ. ‘ಎ’ ಗುಂಪು 31.08.2025ರ ಒಳಗೆ, ‘ಬಿ’ ಗುಂಪು 30.09.2025ರ ಒಳಗೆ, ‘ಸಿ’ ಗುಂಪು 30.11.2025ರ ಒಳಗೆ, ‘ಡಿ’ ಗುಂಪು 31.01.2026ರ ಒಳಗೆ ಎಂದು ಗಡುವು ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ತಮ್ಮ ಸಂಘ ಮತ್ತು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸಂಘಗಳ ಸಂಬಂಧಪಟ್ಟ ಅಧಿಕಾರಿ/ ನೌಕರ ಸದಸ್ಯರನ್ನು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಆದ್ಯತೆಯ ಮೇಲೆ ಪ್ರೇರೇಪಿಸಲು ಕೋರಲಾಗಿದೆ ಎಂದು ಪತ್ರ ಹೇಳಿತ್ತು.

Previous article2030ರ ಕಾಮನ್ ವೆಲ್ತ್ ಕ್ರೀಡಾಕೂಟ: ಬಿಡ್ ಸಲ್ಲಿಕೆಗೆ ಕೇಂದ್ರದ ಒಪ್ಪಿಗೆ
Next articleರಾಯಚೂರು: 2 ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಲೋಕಾಯುಕ್ತರ ಸೂಚನೆ

LEAVE A REPLY

Please enter your comment!
Please enter your name here