Home ಸುದ್ದಿ ರಾಜ್ಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ

ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ

0

ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ(60) ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸಿದೆ ನಿಧನರಾಗಿದ್ದಾರೆ.

ನಟ, ನಿರ್ದೇಶಕ, ನಾಟಕಕಾರ, ಹಾಸ್ಯ ನಾಟಕಗಳ ಮುಖಾಂತರ ಕರ್ನಾಟಕದಾದ್ಯಂತ ಮನೆಮಾತಾಗಿದ್ದರು.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬಲ್ಲಿ 1965ರಲ್ಲಿ ಜನಿಸಿದರು. ಚಿಕ್ಕಂದಿನಿಂದಲೂ ನಾಟಕದಲ್ಲಿ ಆಸಕ್ತಿ ಹೊಂದಿದ್ದ ಇವರು ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮ ಪಡೆದು ನ್ಯೂಯಾರ್ಕ್‌ ವಿಶ್ವವಿದ್ಯಾಲಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದರು.

ರಾಜ್ಯಾದ್ಯಂತ ಹಲವಾರು ನಾಟಕಗಳ ನಿರ್ದೇಶನ. ಅಂಧಯುಗ, ಇನ್‌ಸ್ಪೆಕ್ಟರ್‌ ಜನರಲ್, ಮಿಡ್‌ಸಮರ್‌ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ನಿರ್ದೇಶನ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದ ಕೀರ್ತಿ ಇವರಿಗೆ ಇದೆ.

ರೇಡಿಯೋ, ದೂರದರ್ಶನಗಳಿಗಾಗಿ ಹಲವಾರು ಕಾರ್ಯಕ್ರಮಗಳು. ಗುರು ಸಂಸ್ಥೆಯ ಮುಖಾಂತರ ಲಕ್ಷಾಂತರ ಪ್ರೇಕ್ಷಕರನ್ನು ನಗಿಸಿದ ನಾಟಕಗಳ ನಿರ್ದೇಶಕ, ನಟ, ಆಲ್‌ ದಿ ಬೆಸ್ಟ್, ರಾಶಿ ಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್‌ ನಗೆ ನಾಟಕಗಳನ್ನು ತಿಳಿ ಹಾಸ್ಯದ ಜೊತೆಗೆ ರುಚಿಕರವಾದ ಸವಿಯಾದ ಊಟವನ್ನೂ ಎಂ.ಟಿ.ಆರ್‌. ಸಹ ಯೋಗದೊಡನೆ ಯೋಚಿಸಿ ರಂಗ ಸಂಭ್ರಮದಡಿ ನೀಡಿದ ಕಾರ್ಯಕ್ರಮಗಳು, ರಾಜ್ಯದೆಲ್ಲೆಡೆ ಪಡೆದ ಪ್ರಶಂಸೆಯಾಗಿದೆ.

’ರಾಶಿ ಚಕ್ರ’ ನಗೆ ನಾಟಕದಲ್ಲಿ ಸುಮಾರು 2 ಗಂಟೆಗಳ ಕಾಲ ಪ್ರೇಕ್ಷಕರನ್ನು ನಕ್ಕು ನಗಿಸುವ ಏಕವ್ಯಕ್ತಿ ಅಭಿನಯ. ದೃಶ್ಯರೂಪದಲ್ಲಿ ವಿಡಿಯೋ ಪ್ರದರ್ಶನಗಳ ಮೂಲಕ ಮಾಡಿದ ರಂಗ ಕ್ರಾಂತಿ ಇವರದಾಗಿತ್ತು.

ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ನಟ, ಕೆಲವು ಧಾರಾವಾಹಿಗಳ ಸಂಭಾಷಣಾಕಾರ, ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಸಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version