SK Home Ad
Home ಸುದ್ದಿ ರಾಜ್ಯ ಸಿದ್ದರಾಮಯ್ಯನವರಿಗೆ ರಾಷ್ಟ್ರ ಮಟ್ಟದ ಜವಾಬ್ದಾರಿ ನೀಡಿ ಆದೇಶ

ಸಿದ್ದರಾಮಯ್ಯನವರಿಗೆ ರಾಷ್ಟ್ರ ಮಟ್ಟದ ಜವಾಬ್ದಾರಿ ನೀಡಿ ಆದೇಶ

0
410

ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ಮಟ್ಟದ ಜವಾಬ್ದಾರಿಯನ್ನು ನೀಡಿದೆ.

ಸಿದ್ದರಾಮಯ್ಯನವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ಸಿದ್ದರಾಮಯ್ಯ ಅವರನ್ನು ನೇಮಕ‌ ಮಾಡಲಾಗಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಕಸರತ್ತಿನ ನಡುವೆ ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.