ಕಲ್ಯಾಣ ಕರ್ನಾಟಕದಲ್ಲಿ ಎಕಾನಮಿ ಮಿಷನ್ – ಸಿಎಂ ಡಿ ಕೆ ಶಿವಕುಮಾರ್ ಹಲವು ಯೋಜನೆ ಘೋಷಣೆ : ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹತ್ತು ಪ್ರಮುಖ ಯೋಜನೆಗಳನ್ನು ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಈ ಮಿಷನ್ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಈ ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ ಎಂದಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಿ : ದ್ವೈತ ಸಿದ್ಧಾಂತ ಪ್ರತಿಪಾದಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘದ ಪ್ರಮುಖರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಹುಬ್ಬಳ್ಳಿ ತಾಲೂಕಿನಲ್ಲಿ ಖತರ್ನಾಕ್ ಕಳ್ಳರ ಅಟ್ಟಹಾಸ : ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ಖದೀಮರ ಹಾವಳಿ ಮತ್ತೆ ಶುರುವಾಗಿದೆ. ತಾಲೂಕಿನ ಸುಳ್ಳ ಮತ್ತು ಬ್ಯಾಹಟ್ಟಿ ಗ್ರಾಮಗಳಲ್ಲಿ ಒಂದೇ ರಾತ್ರಿ ಎರಡು ಕೆನರಾ ಬ್ಯಾಂಕ್ ಎಟಿಎಂಗಳನ್ನು ಲೂಟಿ ಮಾಡಲಾಗಿದೆ. ಸುಳ್ಳ ಗ್ರಾಮದಲ್ಲಿನ ಎಟಿಎಂನಲ್ಲಿ 11 ಲಕ್ಷ, ಬ್ಯಾಹಟ್ಟಿ ಗ್ರಾಮದ ಎಟಿಎಂನಲ್ಲಿ 3 ಲಕ್ಣ ಸೇರಿ ಒಟ್ಟು 14 ಲಕ್ಣ ದೋಚಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದು 79ನೇ ಕಲ್ಯಾಣ ಕರ್ನಾಟಕ ಉತ್ಸವ : ಹೈದರಾಬಾದ್ ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕ ಭಾಗ ವಿಮೋಚನೆಗೊಂಡ ಐತಿಹಾಸಿಕ ದಿನದ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಇಂದು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಸಂಸ್ಥಾನ ಭಾರತೀಯ ಒಕ್ಕೂಟಕ್ಕೆ ವಿಲೀನಗೊಂಡ ಹಿನ್ನೆಲೆಯಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಂಕಣ ಬರಹ | ಬರದ ಬರೆಯ ನಡುವೆ `ಬರ ರಾಜಕೀಯ’: ಸಂಯುಕ್ತ ಕರ್ನಾಟಕ ಕಾರ್ಯನಿರ್ವಾಹಕ ಹಾಗೂ ಸಂಪಾದಕ ಮೋಹನ ಹೆಗಡೆ ಅವರು ಇಂದಿನ ತಮ್ಮ ಜನಾಶಯ ಅಂಕಣವು ರಾಜ್ಯದಲ್ಲಿ ಎದುರಾಗಿರುವ ಭೀಕರ ಅನಾವೃಷ್ಟಿ ಮತ್ತು ಬರ ಪರಿಸ್ಥಿತಿಯನ್ನು ರಾಜಕೀಯ ಪಕ್ಷಗಳು ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿವೆ ಎಂಬುದನ್ನು ಕನ್ನಡಿಯ ಹಿಡಿದಂತೆ ತೋರಿಸುತ್ತದೆ. ರಾಜಕೀಯ ಪಕ್ಷಗಳು ಬರದ ರಾಜಕೀಯವನ್ನು ಬಿಟ್ಟು ಜನರ ಕಣ್ಣೀರು ಒರೆಸುವ ನೈಜ ಇಚ್ಛಾಶಕ್ತಿ ಮತ್ತು ಮುತ್ಸದ್ದಿತನವನ್ನು ಪ್ರದರ್ಶಿಸಬೇಕೆಂದು ಅಂಕಣಕಾರರು ಎಚ್ಚರಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್ಡೇಟ್ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















