Home ಸುದ್ದಿ ದೇಶ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ರಕ್ಷಾಬಂಧನ ಗಿಫ್ಟ್‌

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ರಕ್ಷಾಬಂಧನ ಗಿಫ್ಟ್‌

0

ನವದೆಹಲಿ: ರಕ್ಷಾಬಂಧನಕ್ಕೂ ಮುನ್ನವೇ ಕೇಂದ್ರ ಸರ್ಕಾರ ಮಹಿಳೆಯರಿಗೆ ಬಹು ದೊಡ್ಡ ಉಡುಗೊರೆವೊಂದನ್ನು ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಅಗ್ಗದ ಎಲ್‌ಪಿಜಿ ಯೋಜನೆಯನ್ನು ಕೇಂದ್ರ ಸಚಿವ ಸಂಪುಟ 2025-26 ರವರೆಗೆ ವಿಸ್ತರಿಸಿದೆ.

ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ₹ 52,667 ಕೋಟಿ ಮೌಲ್ಯದ ನಿಧಿ ಹಾಗೂ ಯೋಜನೆಗಳಿಗೆ ಅನುಮೋದನೆ ನೀಡಿದೆ. ಎಲ್‌ಪಿಜಿ ಸಬ್ಸಿಡಿಗಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ₹ 12,060 ಕೋಟಿ ಅನುಮೋದನೆ ನೀಡುವ ಮೂಲಕ ಉಜ್ವಲ ಯೋಜನೆ ಅಡಿಯಲ್ಲಿ ನೀಡುವ ಸಬ್ಸಿಡಿ ದರದಲ್ಲಿ ಬಡ ಕುಟುಂಬಗಳು ಅಗ್ಗದ ದರದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬರುವ ವರ್ಷವೂ ಪಡೆಯಲು ಅನೂಕೂಲ ಆಗಲಿದೆ.

ಎಲ್‌ಪಿಜಿ ಗ್ರಾಹಕರಿಗೆ ಪರಿಹಾರ ನೀಡಲು ₹ 30,000 ಕೋಟಿಗಳ ಪ್ರತ್ಯೇಕ ಬಜೆಟ್ ಅನ್ನು ನಿಗದಿಪಡಿಸಲಾಗಿದೆ. ಇದರಿಂದಾಗಿ ಎಲ್‌ಪಿಜಿ ಬೆಲೆಗಳು ನಿಯಂತ್ರಣದಲ್ಲಿವೆ ಎಂದಿದ್ದಾರೆ. ಶುಕ್ರವಾರ ನಡೆದ ಸಚಿವ ಸಂಪುಟದ ಪ್ರಮುಖ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯ ಸುಧಾರಿಸಲು ₹ 4,200 ಕೋಟಿಗಳನ್ನು ಮಂಜೂರು ಮಾಡಲಾಗಿದೆ.

ಇದು ಯುವಕರಿಗೆ ಉತ್ತಮ ತರಬೇತಿ ಮತ್ತು ಉದ್ಯೋಗ ಅವಕಾಶಗಳನ್ನು ಒದಗಿಸುತ್ತದೆ. ಇದರ ಜೊತೆಗೆ, ಅಸ್ಸಾಂ ಮತ್ತು ತ್ರಿಪುರಾಕ್ಕೆ ₹ 4,250 ಕೋಟಿಗಳ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಅನ್ನು ಸಹ ಅನುಮೋದಿಸಲಾಗಿದೆ. ಮರಕ್ಕಣಂ-ಪುದುಚೇರಿ ನಡುವಿನ 4-ಲೇನ್ ಹೆದ್ದಾರಿಗೆ ₹ 2,157 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಮತ್ತಷ್ಟು ಬಲಪಡಿಸಲು ₹12,060 ಕೋಟಿಗೆ ಅನುಮೋದನೆ ನೀಡಲಾಗಿದೆ.

(ಐಒಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್) ಗೆ 12 ಭಾಗಗಳಲ್ಲಿ ಪಾವತಿಸಲಾಗುವುದು ಎಂದು ತಿಳಿಸಿದೆ. ದೇಶೀಯ ಎಲ್‌ಪಿಜಿಯನ್ನು ಪಿಎಸ್‌ಯುಗಳು ನಿಯಂತ್ರಿತ ದರದಲ್ಲಿ ಪೂರೈಸುತ್ತವೆ ಮತ್ತು 2024-25ರ ಉದ್ದಕ್ಕೂ ಅಂತಾರಾಷ್ಟ್ರೀಯ ಎಲ್‌ಪಿಜಿ ಬೆಲೆಗಳು ಹೆಚ್ಚಿವೆ ಎಂದು ಕ್ಯಾಬಿನೆಟ್ ಗಮನಿಸಿದೆ.

ಈ ಏರಿಳಿತದಿಂದ ಗ್ರಾಹಕರನ್ನು ರಕ್ಷಿಸಲು, ಸರ್ಕಾರವು ಹೆಚ್ಚಿದ ವೆಚ್ಚಗಳನ್ನು ವರ್ಗಾಯಿಸಲಿಲ್ಲ. ಇದರಿಂದಾಗಿ ಓಎಂಸಿಗಳಿಗೆ ಗಮನಾರ್ಹ ನಷ್ಟವಾಯಿತು. ಈ ನಷ್ಟದ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಕೈಗೆಟುಕುವ ಬೆಲೆಯಲ್ಲಿ ದೇಶೀಯ ಎಲ್‌ಪಿಜಿಯ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಂಡಿವೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ದೇಶಾದ್ಯಂತ ಬಡ ಕುಟುಂಬಗಳಿಗೆ ಠೇವಣಿ ರಹಿತ ಎಲ್‌ಪಿಜಿ ಸಂಪರ್ಕವನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರ ಮೇ ತಿಂಗಳಲ್ಲಿ ಪ್ರಾರಂಭಿಸಲಾಯಿತು. 14.2 ಕೆಜಿ ಸಿಲಿಂಡರ್‌ಗೆ 300 ರೂ. ನಷ್ಟು ಸಬ್ಸಿಡಿ ನೀಡುವ ಗುರಿಯನ್ನು ಹೊಂದಿದೆ. ದೇಶಾದ್ಯಂತ ಬಡ ಕುಟುಂಬಗಳಿಗೆ ಠೇವಣಿ ರಹಿತ ಎಲ್‌ಪಿಜಿ ಸಂಪರ್ಕವನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರ ಮೇ ತಿಂಗಳಲ್ಲಿ ಪ್ರಾರಂಭಿಸಲಾಯಿತು. 14.2 ಕೆಜಿ ಸಿಲಿಂಡರ್‌ಗೆ 300 ರೂ. ನಷ್ಟು ಸಬ್ಸಿಡಿ ನೀಡುವ ಗುರಿಯನ್ನು ಹೊಂದಿದೆ. 2025-26 ನೇ ಸಾಲಿನಲ್ಲೂ ಉಜ್ವಲಾ ಯೋಜನೆ ಮುಂದುವರೆದಿರುವುದು ಬಡ ಮಧ್ಯಮ ವರ್ಗದಲ್ಲಿ ಸಂತಸ ಮೂಡಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version