SK Home Ad
Home ತಾಜಾ ಸುದ್ದಿ VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ

VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ

0
190

ಭದ್ರಾವತಿ: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್‌ಎಲ್‌) ಮತ್ತೆ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರು ತಿಳಸಿದ್ದಾರೆ, ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದ್ದಾರೆ, ‘ಭದ್ರಾವತಿಯ ಐತಿಹಾಸಿಕ VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ’ಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕಾರ್ಖಾನೆಯನ್ನೇ ಆಧಾರಿಸಿ ಜೀವನ ನಡೆಸುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡಿದ ನಮ್ಮ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದಿದ್ದಾರೆ.