ಬೆಂಗಳೂರು: ಕರ್ನಾಟಕ ಸರ್ಕಾರವು ಬಸವಣ್ಣನವರನ್ನು “ವಿಶ್ವಗುರು ಬಸವಣ್ಣ. ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ:13.02.2024 ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಿದ್ದು. ಇಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಿ ಬಸವಣ್ಣನವರ ಭಾವಚಿತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ಸೈಟ್ನಲ್ಲಿದ್ದಂತೆ ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುತ್ತಾರೆ.