Home Advertisement
Home ತಾಜಾ ಸುದ್ದಿ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

0
95

ನವದೆಹಲಿ: ಬಿಜೆಪಿ ದಿಗ್ಗಜ ಹಾಗೂ ಮಾಜಿ ಉಪ ಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ಅಡ್ವಾಣಿ ಅವರ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.