Home Advertisement
Home ನಮ್ಮ ಜಿಲ್ಲೆ ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ. : ಸಿಎಂ ಬೊಮ್ಮಾಯಿ

ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ. : ಸಿಎಂ ಬೊಮ್ಮಾಯಿ

0
175
CM

ಬೆಳಗಾವಿ: ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ರಾಯಭಾಗದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಒಂದೆಡೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಇದನ್ನು ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಣುಚಿ ಕೊಳ್ಳುತ್ತಿದ್ದಾರೆ. ಯಾಕಿಷ್ಟು ಅಸ್ಪಷ್ಟತೆ ಕಾಂಗ್ರೆಸ್‌ನಲ್ಲಿ ಇದೆ ಎಂದು ತಿಳಿದಿಲ್ಲ ಎಂದು ಅವರು ತಿಳಿಸಿದರು.