ಕೆಎಲ್‌ಇ ಕೋರೆ ಆಸ್ಪತ್ರೆಯಲ್ಲಿ ಎರಡನೇ ಯಶಸ್ವಿ ಯಕೃತ್ತು ಕಸಿ

0
22

ಬೆಳಗಾವಿ: ಉತ್ತರ ಕರ್ನಾಟಕದಲ್ಲಿಯೇ ದ್ವಿತೀಯ ಯಶಸ್ವಿ ಯಕೃತ್ತಿನ ಕಸಿ ಮಾಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ.
ಅನೇಕ ವರ್ಷಗಳಿಂದ ಲೀವರ ವೈಫಲ್ಯದಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಲೀವರ ಕಸಿ ಮಾಡುವದರ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಾನಾಪೂರ ತಾಲೂಕಿನ ಕುಪ್ಪತಗಿರಿ ಗ್ರಾಮದ ನಿವಾಸಿ ನರಸಿಂಗ ಪಾಟೀಲ(೫೦) ಎನ್ನುವವರ ಮೆದುಳು ನಿಷ್ಕ್ರೀಯಗೊಂಡು, ತನ್ನ ಕಾರ್ಯವನ್ನು ನಿಲ್ಲಿಸಿತ್ತು. ಇದರಿಂದ ಕುಟುಂಬ ಸದಸ್ಯರೊಂದಿಗೆ ಆಪ್ತಸಮಾಲೋಚನೆ ಮಾಡಿ, ವ್ಯಕ್ತಿಯು ದಾನ ಮಾಡಿದ ಲೀವರ ಅನ್ನು ಯಕೃತ ವೈಫಲ್ಯದಿಂದ ಬಳಲುತ್ತಿದ್ದ ಹುಬ್ಬಳ್ಳಿಯ ವ್ಯಕ್ತಿಗೆ ಕಸಿ ಮಾಡಲಾಗಿದೆ ಎಂದು ಹಿರಿಯ ಗ್ಯಾಸ್ಟೊಎಂಟ್ರಾಲಾಜಿಸ್ಟ ಡಾ. ಸಂತೋಷ ಹಜಾರೆ ಹೇಳಿದ್ದಾರೆ.
ಕೆಲವೇ ತಿಂಗಳ ಹಿಂದೆ ಮತ್ತೊಂದು ಲೀವರ ಕಸಿಯನ್ನು ಯಶಸ್ವಿಯಾಗಿ ಕೆಎಲ್‌ಇ ಆಸ್ಪತ್ರೆ ಮಾಡಿದೆ. ಅತ್ಯಾಧುನಿಕ ವೈದ್ಯಕೀಯ ಸಲಕರಣೆ ಹಾಗೂ ಲಿವರ ಕಸಿ ಕೇಂದ್ರವಾಗಿ ಉತ್ತರ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜನತೆಗೆ ಆಶಾಕಿರಣವಾಗಿ ಈ ಆಸ್ಪತ್ರೆ ಹೊರಹೊಮ್ಮಿದೆ.
ಇತ್ತೀಚಿನ ದಿನಗಳಲ್ಲಿ ಅಂಗಾಂಗ ದಾನದ ಅರಿವು ಹೆಚ್ಚಾಗುತ್ತಿದ್ದು, ರೋಗಿಯ ಕುಟುಂಬಗಳು ತಮ್ಮ ಪ್ರೀತಿಪಾತ್ರರ ಅಂಗಗಳನ್ನು ದಾನ ಮಾಡಲು ಮುಂದೆ ಬರುತ್ತಿದ್ದಾರೆ, ಇದು ಅನೇಕ ಮಾರಣಾಂತಿಕ ಅನಾರೋಗ್ಯದ ರೋಗಿಗಳಿಗೆ ಎರಡನೇ ಜೀವನಕ್ಕೆ ಸಹಾಯ ಮಾಡುತ್ತಿದೆ.

ಅಂಗಾಂಗ ದಾನ ಮಾಡಿದ ನರಸಿಂಗ ಪಾಟೀಲ
Previous articleಪಕ್ಷ ಬದಲಿಸುವುದು ದೊಡ್ಡ ಅಪರಾಧ ಅಲ್ಲ
Next articleನೇಮೋತ್ಸವಕ್ಕೆ ತಡೆ ತಂದ ವ್ಯಕ್ತಿ ಕುಸಿದು ಬಿದ್ದು ಸಾವು…
‘ಕಾಂತಾರ’ ಹೋಲುವ ಘಟನೆ