ಬೆಂಗಳೂರು: ಮೂಡಾ ಅಸ್ತ್ರದಿಂದ ಹೈರಾಣಾಗಿರುವ ಕಾಂಗ್ರೆಸ್ಸಿಗರು ಇದೀಗ ಕೋವಿಡ್ ಸಂದರ್ಭದಲ್ಲಿ ಆಗಿದೆ ಎನ್ನಲಾದ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಪ್ರತ್ಯಸ್ತ್ರ ಬಳಸಲು ಮುಂದಾಗಬಹುದು.
ಕೋವಿಡ್ ಹಗರಣ ತನಿಖೆಗೆ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗ ಒಟ್ಟು ೧೭೨೨ ಪುಟಗಳ ವರದಿ ಸರ್ಕಾರಕ್ಕೆ ನೀಡಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದ್ದ ಹಣದ ಖರ್ಚು-ವೆಚ್ಚದ ಸಂಪೂರ್ಣ ವರದಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಸೇರಿದೆ. ಈ ಅವಧಿಯಲ್ಲಿ ಕೋಟ್ಯಂತರ ರೂ ಹಣ ದುರುಪಯೋಗ ಆಗಿದೆ. ಈ ಹಿನ್ನೆಲೆಯಲ್ಲಿ ಆಯೋಗವು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆಯೂ ಶಿಫಾರಸ್ಸು ಮಾಡಿದೆ.