Home Advertisement
Home ತಾಜಾ ಸುದ್ದಿ ಕ್ಷೇತ್ರದ ಜನರು ಕೈ ಹಿಡಿದಿದ್ದಾರೆ: ಸಂತೋಷ ಲಾಡ್

ಕ್ಷೇತ್ರದ ಜನರು ಕೈ ಹಿಡಿದಿದ್ದಾರೆ: ಸಂತೋಷ ಲಾಡ್

0
180

ಧಾರವಾಡ: ಕಲಘಟಗಿ ಕ್ಷೇತ್ರದಲ್ಲಿ ನಾನು ಈ ಹಿಂದೆ ಸಚಿವನಾಗಿ, ಶಾಸಕನಾಗಿ ಮಾಡಿದ್ದ ಕೆಲಸಗಳು, ಜನಪರ ಕಾಳಜಿಯಿಂದ ಮಾಡಿದ ಕಾರ್ಯಗಳನ್ನು ಗುರುತಿಸಿ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಹತ್ತು ಹಲವು ಯೋಜನೆ ಅಗತ್ಯವಿದೆ. ಸಕ್ಕರೆ ಕಾರ್ಖಾನೆ ಸ್ಥಾಪನೆ, ಸಣ್ಣ ಕೈಗಾರಿಕೆ ಸ್ಥಾಪನೆ ಸೇರಿದಂತೆ ಮಹತ್ವದ ಯೋಜನೆ ಅವಶ್ಯವಿದೆ ಎಂದರು. ನಾಗರಾಜ ಛಬ್ಬಿ ನನ್ನ ಆತ್ಮೀಯ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ ಎಂದರು.