ಗೃಹ ಪ್ರವೇಶವಾದ ಐದೇ ದಿನಕ್ಕೆ ಮರೆಯಾದ ಅಶ್ವಿನಿ

0
23

ಮಂಗಳೂರು: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತಃ ಪರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(೨೫) ಆತ್ಮಹತ್ಯೆಗೈದ ಯುವತಿ.
ಬುಧವಾರ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ ೨೪ ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಮನೆಯೊಂದನ್ನ ಖರೀದಿಸಿ ಕಳೆದ ಜೂ.೩ ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

Previous articleಕಲುಷಿತ ನೀರು ಸೇವಿಸಿ ಬಾಲಕಿ ಸಾವು
Next articleಉದ್ಘಾಟನೆಯಾದ ಇಂದ್ರಪ್ರಸ್ಥ ವಿ.ವಿ ಕ್ಯಾಂಪಸ್