Home Advertisement
Home ಅಪರಾಧ ಜೈಲು ಸ್ಪೋಟ ಬೆದರಿಕೆ- ಬಂಧನ

ಜೈಲು ಸ್ಪೋಟ ಬೆದರಿಕೆ- ಬಂಧನ

0
91

ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸೀಮ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ ಪಿ ಶೇಷ ಅವರಿಗೆ ಭಾನುವಾರ ಮಧ್ಯಾಹ್ನ ಕರೆ ಮಾಡಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.