ತಮ್ಮ‌ ಪ್ರತಿಯೊಂದು ಸುಳ್ಳಿಗೂ ಏಕೆ ಉತ್ತರಿಸುತ್ತೇವೆ ಗೊತ್ತಿದೆಯೇ?

0
16
ಅಶ್ವಮೇಧ

ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ

ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಕರ್ನಾಟಕದ ಸಾರಿಗೆ ಇಲಾಖೆಯನ್ನು “ಶಕ್ತಿ” ಹೆಸರಿನಲ್ಲಿ “ನಿಶ್ಯಕ್ತಿ”ಗೊಳಿಸುತ್ತಿದೆ ಎಂಬ ಬಿಜೆಪಿಯವರ ಪೋಸ್ಟ್ ಗೆ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದು ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ.

ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್​ಆರ್​ಟಿಸಿಗೆ – ರೂ‌‌.2481 ಕೋಟಿ , ಬಿಎಂಟಿಸಿಗೆ – ರೂ. 1126 ಕೋಟಿ ., ವಾಯುವ್ಯ ಸಾರಿಗೆಗೆ – ರೂ 1613 ಕೋಟಿ . ಕಲ್ಯಾಣ ಕರ್ನಾಟಕ ಸಾರಿಗೆಗೆ- ರೂ 1321 ಕೋಟಿ ರೂ. ಅನುದಾನ, ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ರೂ 6543 ಕೋಟಿ ಅನುದಾನವನ್ನು ಸರ್ಕಾರ 2023ರ ಜೂನ್​​ನಿಂದ 2024ರ ನವೆಂಬರ್​​ವರೆಗೆ ಬಿಡುಗಡೆ ಮಾಡಿದೆ.

ಈವರೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ನಮಗೆ ರೂ‌ 414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ?

ತಮ್ಮ ಬಿ.ಜೆ.ಪಿ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ.

2023 ಮಾರ್ಚ್ ನಲ್ಲಿ , 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಜೆ ಬೇಕಾದ ಅನುದಾನವನ್ನು ನೀಡದೆ, ನಿವೃತ್ತಿ‌ ಹೊಂದಿದ 11694 ಸಿಬ್ಬಂದಿಗಳಿಗೆ ತಮ್ಮ ಕಾಲದ ಉಪಧನ ಮತ್ತು ಗಳಿಕೆ ರಜೆ ಬಾಕಿ ಹಣ ರೂ. 224.05 ಕೋಟಿ ನಾವು ಎರಡು ದಿನದ ಹಿಂದೆ ಪಾವತಿಸಿದ್ದೇವೆ. ತಮ್ಮ ದುರಾಡಳಿತಕ್ಕೆ ಇದಕ್ಕಿಂತ
ಬೇರೆ ಕೈಗನ್ನಡಿಯ ಅವಶ್ಯಕತೆ ಇದೆಯೇ?

ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ, ಶೂನ್ಯ ಅಭಿವೃದ್ಧಿ ಕಾರ್ಯ,‌ ಶೂನ್ಯ ಸಾಧನೆಗೆ ಹಾಗೂ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದ ತಮ್ಮ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ ಎಂದಿದ್ದಾರೆ.

Previous articleಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಒಡೆದು ಚಾಲಕನ ಕಣ್ಣಿಗೆ ಕಾರದಪುಡಿ ಎರಚಿ ದರೋಡೆ
Next articleಖೂಬಾ ಮೊದಲು ಪತ್ರಿಕೆ ಓದೋದು ಕಲಿಯಬೇಕು