SK Home Ad
Home ತಾಜಾ ಸುದ್ದಿ ಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ಬದ್ಧ: ಜನತೆಗೆ ಧನ್ಯವಾದ ಅರ್ಪಿಸಿದ ಸೋನಿಯಾ

ಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ಬದ್ಧ: ಜನತೆಗೆ ಧನ್ಯವಾದ ಅರ್ಪಿಸಿದ ಸೋನಿಯಾ

0
177

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ನೀಡಿರುವ ರಾಜ್ಯ ಜನತೆಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶವಾಗಿದೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ ಎಂದಿದ್ದಾರೆ.