SK Home Ad
Home ತಾಜಾ ಸುದ್ದಿ ಫಲಿತಾಂಶಕ್ಕೆ ಮುನ್ನ ಯಲ್ಲಮ್ಮ ದೇವಿ ದರ್ಶನ ಪಡೆದ ಬೊಮ್ಮಾಯಿ

ಫಲಿತಾಂಶಕ್ಕೆ ಮುನ್ನ ಯಲ್ಲಮ್ಮ ದೇವಿ ದರ್ಶನ ಪಡೆದ ಬೊಮ್ಮಾಯಿ

0
172

ಸವದತ್ತಿ: ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸಮೀಪದ ಯಲ್ಲಮ್ಮನಗುಡ್ಡಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ಕುಲದೇವತೆಯಾದ ಆಧಿಶಕ್ತಿ ಏಳುಕೋಳ್ಳದ ಶ್ರೀರೇಣುಕಾ ಯಲ್ಲಮ್ಮ ದೇವಿ ದರ್ಶನ ಆಶೀರ್ವಾದ ಪಡೆದುಕೊಂಡರು. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅದಕ್ಕೂ ಮುನ್ನ ದೇವಿಗೆ ಪೂಜೆ ಸಲ್ಲಿಸಿ, ಈ ಚುನಾವಣೆಯಲ್ಲಿ ಗೆಲ್ಲಿಸುವಂತೆ ಪ್ರಾರ್ಥಿಸಿದರು.