Home Advertisement
Home ತಾಜಾ ಸುದ್ದಿ ಬಿಜೆಪಿಯವರಿಗೆ ಭಯ ಶುರುವಾಗಿದೆ: ಸಿದ್ದರಾಮಯ್ಯ

ಬಿಜೆಪಿಯವರಿಗೆ ಭಯ ಶುರುವಾಗಿದೆ: ಸಿದ್ದರಾಮಯ್ಯ

0
247
ಸಿದ್ದರಾಮಯ್ಯ

ಭಾರತ್ ಜೋಡೊ ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ‌ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆ ಹಮ್ಮಿಕೊಂಡಿರುವುದು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶಕ್ಕಲ್ಲ. ಜನರಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ, ಈ ಜನರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂಬ ಕಾರಣಕ್ಕೆ. ಭಾರತ ಐಕ್ಯತಾ ಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದರು.