Home Advertisement
Home ಅಪರಾಧ ಮಹಿಷಾಸುರ ಪ್ರತಿಮೆಗೆ ಸಿಎಂ ಭಾವಚಿತ್ರ: ಎಫ್‌ಐಆರ್‌ ದಾಖಲು

ಮಹಿಷಾಸುರ ಪ್ರತಿಮೆಗೆ ಸಿಎಂ ಭಾವಚಿತ್ರ: ಎಫ್‌ಐಆರ್‌ ದಾಖಲು

0
135

ಬೆಂಗಳೂರು: ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ತಿರುಚಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ʻಸೀನಾ ಹಿಂದೂಸ್ತಾನಿʼ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಮಹಿಷಾಸುರ ಪ್ರತಿಮೆಗೆ ಮುಖ್ಯಮಂತ್ರಿಗಳ ಚಿತ್ರವನ್ನು ಮಾರ್ಫಿಂಗ್‌ ಮಾಡಲಾಗಿದ್ದು, ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದರಾಜ್‌ ಎನ್ನುವವರು ದೂರು ದಾಖಲಿಸಿದ್ದಾರೆ.