Home Advertisement
Home ತಾಜಾ ಸುದ್ದಿ ಯಡಿಯೂರಪ್ಪ ಬಲ ಪಡಿಸಲು ವೀರಶೈವ ಲಿಂಗಾಯತರ ಸಭೆ

ಯಡಿಯೂರಪ್ಪ ಬಲ ಪಡಿಸಲು ವೀರಶೈವ ಲಿಂಗಾಯತರ ಸಭೆ

0
171

ದಾವಣಗೆರೆ: ಯಡಿಯೂರಪ್ಪ ಮತ್ತು ಬಿ. ವೈ. ವಿಜಯೇಂದ್ರ ಅವರನ್ನು ಬೆಂಬಲಿಸಿ 3 ಜಿಲ್ಲೆಗಳ ವೀರಶೈವ ಲಿಂಗಾಯತ ಮುಖಂಡರ ಸಭೆ ಇಂದು ವಿದ್ಯಾನಗರದ ಬೈ ಪಾಸ್ ರಸ್ತೆಯಲ್ಲಿನ ಸಮೃದ್ಧಿ ಫಂಕ್ಷನ್ ಹಾಲ್‌ನಲ್ಲಿ ಆರಂಭ ಆಗಿದೆ.
ಹಾವೇರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಮಾಜಿ ಸಚಿವರಾದ ಎಸ್. ಎ. ರವೀಂದ್ರನಾಥ್, ಎಂ. ಪಿ. ರೇಣುಕಾಚಾರ್ಯ, ಮಾಜಿ ಶಾಸಕರಾದ ಅರುಣ್ ಕುಮಾರ್ ಪೂಜಾರ್, ಮಾಡಾಳು ವಿರೂಪಾಕ್ಷಪ್ಪ, ಮಾಜಿ ಮೇಯರ್ ಗಳಾದ ಅಜಯಕುಮಾರ್ ಸೇರಿದಂತೆ ಹಲವು ನಾಯಕರು ಯಡಿಯೂರಪ್ಪನವರ ಜೊತೆ ನಾವಿದ್ದೇವೆ. ಬಿ.ವೈ. ವಿಜಯೇಂದ್ರ ಜೊತೆ ಇದ್ದೇವೆ ಎಂದು ನಿರೂಪಿಯಲು ನಾವೆಲ್ಲ ಸೇರಿದ್ದೇವೆ ಎಂದು ಘೋಷಿಸಿದರು.