Home Advertisement
Home ತಾಜಾ ಸುದ್ದಿ ರಾಜ್ಯದಲ್ಲಿ ಸರ್ಕಾರ ಬದುಕಿಲ್ಲ

ರಾಜ್ಯದಲ್ಲಿ ಸರ್ಕಾರ ಬದುಕಿಲ್ಲ

0
81

ಮೈಸೂರು: ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘನೆ ಮಾಡುವವರ ಪರವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜ್ಞಾನವ್ಯಾಪಿ ಮಸೀದಿಗಾಗಿ ಬಲಿದಾನಕ್ಕೆ ಸಿದ್ಧ ಎಂಬ ಎಸ್‍ಡಿಪಿಐನ ಅಬ್ದುಲ್ ಮಜೀದ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಬ್ದುಲ್ ಮಜೀದ್ ಕೋರ್ಟ್ ವಿರುದ್ಧ ಮಾತಾಡಿದರೂ ಬಂಧನವಾಗಿಲ್ಲ.‌ ಬಂಧಿಸದೆ ಕಾನೂನು ಉಲ್ಲಂಘನೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಬದುಕಿಲ್ಲ ಎಂದು ಆಕ್ರೋಶ ಹೊರಹಾಕಿದರು.