ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಡಾ.ತ್ರಿಲೋಕ್ ಚಂದ್ರ ಕೆ.ವಿ ಅವರನ್ನು ಶಾಲಾ ಶಿಕ್ಷಣ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ
ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಶಾಲಾ ಶಿಕ್ಷಣ ಆಯುಕ್ತರಾಗಿದ್ದ ಕಾವೇರಿ.ಬಿ.ಬಿ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಕಾವೇರಿ ಅವರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿ ವಹಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿಯಿಂದ ತ್ರಿಲೋಕ್ ಚಂದ್ರ ಅವರನ್ನು ಮುಕ್ತಗೊಳಿಸಲಾಗಿದೆ.