ಹುಬ್ಬಳ್ಳಿ: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ವಿಚಾರಗಳು ಹಾದಿ ಬೀದಿಯಲ್ಲಿ ಚರ್ಚೆ ಆಗುವ ವಿಷಯವಲ್ಲ ಎಂದು ಅಬಕಾರಿ ಸಚಿವ ಆರ್ .ಬಿ. ತಿಮ್ಮಾಪುರ ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ವಿಚಾರಗಳು ಮಾಧ್ಯಮಗಳಲ್ಲಿ ನೋಡುತ್ತಿರುವುದು. ಮಾಧ್ಯಮದವರೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇದು ಹಾದಿ ಬೀದಿಯಲ್ಲಿ ಚರ್ಚೆ ಆಗುವ ವಿಷಯವಲ್ಲ ಇದಕ್ಕಾಗಿಯೇ ಒಂದು ರೂಪು ರೇಶೆ ಇದೆ. ಹೈಕಮಾಂಡ್ , ಸಿಎಲ್,ಪಿ ಇದೆ ಎಂದರು. ಇನ್ನು ಎಸ್ಇ ಪಿ/ ಟಿಎಸ್ ಪಿ ಅನುದಾನ ದುರ್ಬಳಕೆ ಆಗುತ್ತಿದೆ ಎಂಬ ವಿಚಾರವಾಗಿ, ಯಾವುದೇ ಕಾರಣಕ್ಕೂ ದುರ್ಬಳಕೆ ಆಗಿಲ್ಲ. ರಿಯಾಲಿಟಿ ನೋಡಬೇಕು ಎಂದರು.