Home Advertisement
Home ತಾಜಾ ಸುದ್ದಿ ಹಕ್ಕು ಚಲಾಯಿಸಿದ ಸದ್ಗುರು

ಹಕ್ಕು ಚಲಾಯಿಸಿದ ಸದ್ಗುರು

0
97

ತಮಿಳನಾಡು: ಸದ್ಗುರು ಜಗ್ಗಿ ವಾಸುದೇವ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮತ ಚಲಾಯಿಸಿದರು.
ಈ ಕುರಿತಂತೆ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ.
ಆಧ್ಯಾತ್ಮಿಕ ಗುರು ‘ಸದ್ಗುರು’ ಜಗ್ಗಿ ವಾಸುದೇವ್ ಅವರು ಕೊಯಮತ್ತೂರಿನಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮತ ಚಲಾಯಿಸಿದರು. ಕೆಲ ದಿನಗಳ ಹಿಂದಷ್ಟೇ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸದ್ಗುರುಗುಣಮುಖರಾಗುತ್ತಿದ್ದಾರೆ. 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. 1,600ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.