<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>#PoliticalNews Archives - Samyukta Karnataka</title>
	<atom:link href="https://samyuktakarnataka.in/tag/politicalnews/feed/" rel="self" type="application/rss+xml" />
	<link>https://samyuktakarnataka.in/tag/politicalnews/</link>
	<description>News that connects you to Karnataka since 1921</description>
	<lastBuildDate>Tue, 30 Jun 2026 12:16:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://samyuktakarnataka.in/wp-content/uploads/2025/07/SK-FAVICON-150x146.jpg</url>
	<title>#PoliticalNews Archives - Samyukta Karnataka</title>
	<link>https://samyuktakarnataka.in/tag/politicalnews/</link>
	<width>32</width>
	<height>32</height>
</image> 
	<item>
		<title>ಮಾಜಿ ಸಿಎಂ ಸಿದ್ದು ಎದರು ಶಾಸಕ ಪ್ರದೀಪ್‌ ಈಶ್ವರ್‌ ಕಣ್ಣಿರು: ಚಪ್ಪಲಿ ಎಸೆತ ಪ್ರಕರಣ; ತನಿಖೆಗೆ ಆದೇಶ</title>
		<link>https://samyuktakarnataka.in/districts/chikkaballapur/pradeep-eshwar-breaks-down-before-siddaramaiah/</link>
		
		<dc:creator><![CDATA[Samyuktha Karnataka]]></dc:creator>
		<pubDate>Tue, 30 Jun 2026 12:16:11 +0000</pubDate>
				<category><![CDATA[ಚಿಕ್ಕಬಳ್ಳಾಪುರ]]></category>
		<category><![CDATA[#BreakingNews]]></category>
		<category><![CDATA[#chikkaballapur]]></category>
		<category><![CDATA[#Congress]]></category>
		<category><![CDATA[#DKShivakumar]]></category>
		<category><![CDATA[#IndiaPolitics]]></category>
		<category><![CDATA[#KarnatakaNews]]></category>
		<category><![CDATA[#KarnatakaPolitics]]></category>
		<category><![CDATA[#LatestNews]]></category>
		<category><![CDATA[#NewsUpdate]]></category>
		<category><![CDATA[#PoliticalControversy]]></category>
		<category><![CDATA[#PoliticalNews]]></category>
		<category><![CDATA[#PradeepEshwar]]></category>
		<category><![CDATA[#samyuktakarnataka]]></category>
		<category><![CDATA[#Siddaramaiah]]></category>
		<category><![CDATA[#TrendingNews]]></category>
		<guid isPermaLink="false">https://samyuktakarnataka.in/?p=101870</guid>

					<description><![CDATA[<p>ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಮಾಜಿ ಸಿಎಂ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ನಿಂದಿಸಿ, ಚಪ್ಪಲಿ ಎಸೆದಿರುವ ಕುರಿತು ಪ್ರದೀಪ್ ಈಶ್ವರ್ ಭಾವುಕರಾಗಿ ವಿವರಿಸಿದ್ದಾರೆ. ಈ ವೇಳೆ ಶಾಸಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, &#8220;ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡದೆ ಎದುರಿಸಬೇಕು, ನಾವು ನಿಮ್ಮೊಂದಿಗಿದ್ದೇವೆ&#8221; ಎಂದು ಸಾಂತ್ವನ ಹೇಳಿದ್ದಾರೆ. [&#8230;]</p>
<p>The post <a href="https://samyuktakarnataka.in/districts/chikkaballapur/pradeep-eshwar-breaks-down-before-siddaramaiah/">ಮಾಜಿ ಸಿಎಂ ಸಿದ್ದು ಎದರು ಶಾಸಕ ಪ್ರದೀಪ್‌ ಈಶ್ವರ್‌ ಕಣ್ಣಿರು: ಚಪ್ಪಲಿ ಎಸೆತ ಪ್ರಕರಣ; ತನಿಖೆಗೆ ಆದೇಶ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph">ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಮಾಜಿ ಸಿಎಂ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ನಿಂದಿಸಿ, ಚಪ್ಪಲಿ ಎಸೆದಿರುವ ಕುರಿತು ಪ್ರದೀಪ್ ಈಶ್ವರ್ ಭಾವುಕರಾಗಿ ವಿವರಿಸಿದ್ದಾರೆ. ಈ ವೇಳೆ ಶಾಸಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, &#8220;ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡದೆ ಎದುರಿಸಬೇಕು, ನಾವು ನಿಮ್ಮೊಂದಿಗಿದ್ದೇವೆ&#8221; ಎಂದು ಸಾಂತ್ವನ ಹೇಳಿದ್ದಾರೆ.</p>



<p class="wp-block-paragraph">ನಂತರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಗೃಹ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರ ಮೇಲೆ ಇಂತಹ ದಾಳಿ ನಡೆದಿರುವುದಕ್ಕೆ ಬೇಸರ ವ್ಯಕ್ತಪಡಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚಿಸಿದ್ದಾರೆ. ಹಾಗೇ ಕರ್ತವ್ಯ ಲೋಪ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.</p>



<p class="wp-block-paragraph">ಮತ್ತೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು &#8216;ಎಕ್ಸ್&#8217; (ಟ್ವಿಟರ್) ಮೂಲಕ ವಿರೋಧ ಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. &#8220;ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಯುವ ನಾಯಕನ ಜನಪ್ರಿಯತೆ ಜೀರ್ಣಿಸಿಕೊಳ್ಳಲಾಗದೆ ನಡೆಸಿರುವ ಈ ನೀಚ ಕೃತ್ಯವು ವಿಪಕ್ಷಗಳ ಹತಾಶೆ ಹಾಗೂ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಇಂತಹ ಹಿಂಸಾತ್ಮಕ ದಾಳಿಗಳಿಂದ ನಮ್ಮ ನಾಯಕರು ಧೃತಿಗೆಡುವುದಿಲ್ಲ, ಬದಲಾಗಿ ಹೋರಾಟದ ಹಾದಿ ಮತ್ತಷ್ಟು ಗಟ್ಟಿಯಾಗುತ್ತದೆ&#8221; ಎಂದು ಕಿಡಿಕಾರಿದ್ದಾರೆ.</p>



<p class="wp-block-paragraph">&#8220;ಇದು ಬಸವಣ್ಣ, ಕುವೆಂಪು ಅಂತಹ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ,&#8221; ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.</p>
<p>The post <a href="https://samyuktakarnataka.in/districts/chikkaballapur/pradeep-eshwar-breaks-down-before-siddaramaiah/">ಮಾಜಿ ಸಿಎಂ ಸಿದ್ದು ಎದರು ಶಾಸಕ ಪ್ರದೀಪ್‌ ಈಶ್ವರ್‌ ಕಣ್ಣಿರು: ಚಪ್ಪಲಿ ಎಸೆತ ಪ್ರಕರಣ; ತನಿಖೆಗೆ ಆದೇಶ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಅಂಕಿ-ಅಂಶಗಳಿಲ್ಲದೆ ಬಂದ ಆಫೀಸರ್ಸ್: ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ತರಾಟೆ</title>
		<link>https://samyuktakarnataka.in/districts/bengaluru/am-i-sitting-with-a-hibiscus-in-my-ear-minister-blasts-officials-over-missing-data/</link>
		
		<dc:creator><![CDATA[Samyuktha Karnataka]]></dc:creator>
		<pubDate>Tue, 30 Jun 2026 10:05:51 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[#BBMP]]></category>
		<category><![CDATA[#Bengaluru]]></category>
		<category><![CDATA[#BreakingNews]]></category>
		<category><![CDATA[#GBA]]></category>
		<category><![CDATA[#Government]]></category>
		<category><![CDATA[#KarnatakaNews]]></category>
		<category><![CDATA[#KarnatakaPolitics]]></category>
		<category><![CDATA[#KrishnaByreGowda]]></category>
		<category><![CDATA[#NewsUpdate]]></category>
		<category><![CDATA[#PoliticalNews]]></category>
		<category><![CDATA[#PublicAccountability]]></category>
		<category><![CDATA[#samyuktakarnataka]]></category>
		<category><![CDATA[#StrayDogs]]></category>
		<category><![CDATA[#TreePlantation]]></category>
		<category><![CDATA[#TrendingNews]]></category>
		<guid isPermaLink="false">https://samyuktakarnataka.in/?p=101848</guid>

					<description><![CDATA[<p>ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಹಾಗೂ ಗಿಡ ನೆಡುವ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ಅಂಕಿ-ಅಂಶಗಳಿಲ್ಲದೆ ಜಿಬಿಎ (GBA) ಸಭೆಗೆ ಬಂದಿದ್ದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, &#8220;ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದರೂ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೆ ಬಂದಿದ್ದೀರಾ? ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?&#8221; ಎಂದು ಕಿಡಿ ಕಾರಿದ್ದಾರೆ. ಹಾಗೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಗರದಲ್ಲಿ ಕಳೆದ 50 [&#8230;]</p>
<p>The post <a href="https://samyuktakarnataka.in/districts/bengaluru/am-i-sitting-with-a-hibiscus-in-my-ear-minister-blasts-officials-over-missing-data/">ಅಂಕಿ-ಅಂಶಗಳಿಲ್ಲದೆ ಬಂದ ಆಫೀಸರ್ಸ್: ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ತರಾಟೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಬೆಂಗಳೂರು: </strong>ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಹಾಗೂ ಗಿಡ ನೆಡುವ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ಅಂಕಿ-ಅಂಶಗಳಿಲ್ಲದೆ ಜಿಬಿಎ (GBA) ಸಭೆಗೆ ಬಂದಿದ್ದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, &#8220;ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದರೂ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೆ ಬಂದಿದ್ದೀರಾ? ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?&#8221; ಎಂದು ಕಿಡಿ ಕಾರಿದ್ದಾರೆ.</p>



<p class="wp-block-paragraph">ಹಾಗೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಗರದಲ್ಲಿ ಕಳೆದ 50 ವರ್ಷಗಳಿಂದ ಬೀದಿ ನಾಯಿಗಳ ಸಮಸ್ಯೆ ಇದೆ. ಬಿಬಿಎಂಪಿ ರಚನೆಯಾದ ಬಳಿಕ 8.80 ಲಕ್ಷ ಹಾಗೂ 2016 ರಿಂದ 2023ರ ಅವಧಿಯಲ್ಲಿ 3.33 ಲಕ್ಷ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ 2019ರ ಸರ್ವೆ ಪ್ರಕಾರ 3.10 ಲಕ್ಷ ಹಾಗೂ 2023ರ ಸರ್ವೆ ಪ್ರಕಾರ ನಗರದಲ್ಲಿ ಕೇವಲ 2.79 ಲಕ್ಷ ಬೀದಿ ನಾಯಿಗಳಿವೆ. ಅಧಿಕಾರಿಗಳ ಲೆಕ್ಕಾಚಾರ ನೋಡಿದರೆ ಇರುವ ನಾಯಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ನಡೆದಂತಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಇದಕ್ಕಾಗಿ 42 ಕೋಟಿ ರೂ. ಜನರ ತೆರಿಗೆ ಹಣ ಖರ್ಚಾಗಿದ್ದರೂ, ನಾಯಿಗಳ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಂತಾನಹರಣ ಚಿಕಿತ್ಸೆಯ ಸಂಖ್ಯೆಯನ್ನು ದ್ವಿಗುಣಗೊಳಿಸಲು ಮತ್ತು ಅಗತ್ಯವಿದ್ದರೆ ಹೊರಗುತ್ತಿಗೆ ಸಿಬ್ಬಂದಿ ಬಳಸಿಕೊಳ್ಳಲು ಸೂಚಿಸಿದ್ದಾರೆ.</p>



<p class="wp-block-paragraph">ನಂತರ ಇದೇ ವೇಳೆ ಗಿಡ ನೆಡುವ ಯೋಜನೆಯಲ್ಲೂ ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 2008ರಿಂದ 20 ಲಕ್ಷ ಗಿಡ ನೆಟ್ಟಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ, ಆದ್ರೆ ಮರಗಣತಿ ಪ್ರಕಾರ ನಗರದಲ್ಲಿ ಇರುವುದು ಕೇವಲ 9 ಲಕ್ಷ ಮರಗಳು ಮಾತ್ರ. ಹಾಗಾದರೆ ಉಳಿದ ಗಿಡಗಳು ಎಲ್ಲಿ ಹೋದವು ಎಂದು ಸಚಿವರು ಪ್ರಶ್ನಿಸಿದರು. ಒಂದು ಗಿಡ ನೆಟ್ಟು 3 ವರ್ಷ ನಿರ್ವಹಣೆ ಮಾಡಲು 2,300 ರೂ. ನಿಂದ 3,300 ರೂ. ವೆಚ್ಚ ಮಾಡಲಾಗುತ್ತದೆ. ನಿಯಮದ ಪ್ರಕಾರ ಗುಂಡಿ ತೋಡಿ ಗಿಡ ನೆಡಬೇಕು, ಆದರೆ ನನ್ನ ಸ್ವಂತ ಕ್ಷೇತ್ರದಲ್ಲೇ ಇಂತಹ ಕಾಮಗಾರಿ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳುವ ಮೂಲಕ ವ್ಯವಸ್ಥೆಯನ್ನು ಸಂಪೂರ್ಣ ಸರಿಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.</p>



<p class="wp-block-paragraph"></p>
<p>The post <a href="https://samyuktakarnataka.in/districts/bengaluru/am-i-sitting-with-a-hibiscus-in-my-ear-minister-blasts-officials-over-missing-data/">ಅಂಕಿ-ಅಂಶಗಳಿಲ್ಲದೆ ಬಂದ ಆಫೀಸರ್ಸ್: ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ತರಾಟೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
	</channel>
</rss>
